News Karnataka Kannada
Saturday, April 27 2024
ಗದಗ

ಗದಗದಲ್ಲಿ ಭೀಕರ ರಸ್ತೆ ಅಪಘಾತ, ಐವರು ಸ್ಥಳದಲ್ಲಿಯೇ ಸಾವು

Five killed in road accident in Gadag
Photo Credit : News Kannada

ಗದಗ: ಸರ್ಕಾರಿ ಬಸ್‌ ಹಾಗೂ ಟಾಟಾ ಸುಮೋ ಮಧ್ಯೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗದಗ ಜಿಲ್ಲೆ ನರೇಗಲ್ ಹೋಬಳಿಯ ಗಜೇಂದ್ರಗಡ ನರೇಗಲ್‌ ಮಾರ್ಗಮಧ್ಯೆ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತರು ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಮಾದನಹಿಪ್ಪರಗಿ ಹಾಗೂ ಅಫಜಲಪುರ ಗ್ರಾಮದವರು ಎನ್ನಲಾಗಿದೆ.

ಟಾಟಾ ಸುಮೋ ವಾಹನದಲ್ಲಿದ್ದವರು ಗದಗ ಜಿಲ್ಲೆಯ ಲಕ್ಷೇಶ್ವರ ತಾಲ್ಲೂಕಿನ ಬಾಲೆಹೊಸೂರ ಗ್ರಾಮದ ಮಠ ಹಾಗೂ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಹೊರಟಿದ್ದರು. ನರೇಗಲ್ ಪಟ್ಟಣದಿಂದ ಗಜೇಂದ್ರಗಡ ಕಡೆಗೆ ಹೊರಟಿದ್ದ ಬಸ್ ಹಾಗೂ ಗಜೇಂದ್ರದ ಮಾರ್ಗದ ಮೂಲಕ ಬರುತಿದ್ದ ಟಾಟಾ ಸುಮೋ ವಾಹನಗಳು ನರೇಗಲ್ ಹೊರವಲಯದ ಗಡ್ಡಿ ಹಳ್ಳದ ಸಮೀಪದಲ್ಲಿ ಡಿಕ್ಕಿಯಾಗಿದೆ.

ಮಾದೇನ ಹಿಪ್ಪರಗಿ ನಿವಾಸಿಗಳಾದ ಶಿವಕುಮಾರ ಕಲಶೆಟ್ಟಿ (50), ಚಂದ್ರಕಲಾ ಕಲಶೆಟ್ಟಿ (12), ರಾಣಿ ಕಲಶೆಟ್ಟಿ (12) ಹಾಗೂ ಅಫಜಲಪುರ ನಿವಾಸಿಗಳಾದ ಸಚಿನ್‌ ಅಬ್ಬಾಸ್ ಕತ್ತಿ (31), ದ್ರಾಕ್ಷಾಯಣಿ ಕತ್ತಿ(33) ಮೃತರು ಎಂದು ಗುರುತಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು