ಗದಗ: ದಲಿತ ಸಾಹಿತ್ಯ ಪರಿಷತ್ ನ ರಜತ ಮಹೋತ್ಸವ ಹಾಗೂ 9ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅ.30ರ ಭಾನುವಾರ ಬೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಅಖಿಲ ಭಾರತ ಗಜಲ್ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ ತಿಳಿಸಿದರು.
ತಾಲೂಕಿನ ಬೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 30 ಜಿಲ್ಲಾ ಘಟಕಗಳನ್ನು ಹೊಂದಿರುವ ಪರಿಷತ್ತು ಈವರೆಗೆ 60ಕ್ಕೂ ಹೆಚ್ಚು ಅಮೂಲ್ಯ ಕೃತಿಗಳನ್ನು ಪ್ರಕಟಿಸಿದೆ. ದಲಿತ ಸಾಹಿತ್ಯ ಪರಿಷತ್ತು ತನ್ನ 28ನೇ ವರ್ಷದಲ್ಲಿ ಮುನ್ನಡೆಯುತ್ತಿದೆ ಎಂದರು.
ದಲಿತ ಸಾಹಿತ್ಯ ಪರಿಷತ್ತಿನ ರಜತ ಮಹೋತ್ಸವದ ಅಂಗವಾಗಿ ಅ.30ರ ಭಾನುವಾರ ದೊರೆಸ್ವಾಮಿ ಮಠದ ಆವರಣದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಅಖಿಲ ಭಾರತ ಗಜಲ್ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದರು.
ರಾಜ್ಯದ 30 ಜಿಲ್ಲೆಗಳಿಂದ ನೂರಾರು ಹಿರಿಯ ಮತ್ತು ಯುವ ಗಝಲ್ ಸಾಹಿತಿಗಳು, ಸ್ಥಳೀಯ ಸಾಹಿತಿಗಳು ಮತ್ತು ರಾಜಕಾರಣಿಗಳು ಒಂದು ದಿನದ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 25 ಗಜಲ್ ಸಾಹಿತಿಗಳಿಗೆ ‘ಬೆಳ್ಳಿ ಸಂಭ್ರಮ’, ‘ಗಝಲ್ ಕಾವ್ಯ ಪ್ರಶಸ್ತಿ’, ‘ಗಜಲ್ ಕಾವ್ಯ ಪ್ರಶಸ್ತಿ’ ಮತ್ತು ಗಜಲ್ ಕಾವ್ಯ ಮೇಳವನ್ನು ಪ್ರದಾನ ಮಾಡಲಾಗುವುದು.
ಸಮ್ಮೇಳನದ ಅಧ್ಯಕ್ಷರ ಮೆರವಣಿಗೆ ಮತ್ತು ಗಝಲ್ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಡಿನ ಪ್ರಸಿದ್ಧ ಗಜಲ್ ಕವಿ ಕನಕಗಿರಿಯ ಅಲ್ಲಗಿರಿರಾಜರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಸಮ್ಮೇಳನವನ್ನು ಅಣ್ಣಿಗೇರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಬ್ದುಲ್ ಖಾದರ್ ನಾಡಕಟ್ಟಿ ಉದ್ಘಾಟಿಸಲಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಚಿಂತಕ ಡಾ.ಎನ್.ಚಿನ್ನಸ್ವಾಮಿ ಸೋಸಲೆ ಅವರು ‘ರಜತ ಮಹೋತ್ಸವ ಗಜಲ್ ಕಾವ್ಯ ಪ್ರಶಸ್ತಿ’ಯನ್ನು ಪ್ರದಾನ ಮಾಡುವರು.