ಗದಗ: ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ ಸುಭಾಷ್ ನಾಯಕ (23) ಕೊಲೆಯಾದ ಯುವಕ.
ಮೂವರು ಯುವಕರು ನಿರ್ಜನ ಬಯಲು ಪ್ರದೇಶದಲ್ಲಿ ರಾತ್ರಿ ಪಾರ್ಟಿ ಮಾಡಿದ್ದರು. ಆದರೆ ಅದೇ ದಿನ ಮಧ್ಯರಾತ್ರಿ ಸುಭಾಷ್ನ ಕೊಲೆಯಾಗಿದೆ. ಬಾಟಲ್ ನಿಂದ ಚುಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಇದಕ್ಕೆ ಸೂಕ್ತ ಕಾರಣ ಯಾರೆಂದು ಇನ್ನು ಮಾಹಿತಿ ಸಿಕ್ಕಿಲ್ಲ.
ಇನ್ನು ಪಾರ್ಟಿಯಲ್ಲಿದ್ದ ಇಬ್ಬರು ಈಗಾಗಲೇ ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಮುಂಡರಗಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.