ಗದಗ: ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
ಅಪ್ಪಣ್ಣ ಕನಕಪ್ಪ ಗೊರಕಿ (28), ಲಲಿತಾ ರಾಜೇಂದ್ರ ಹಲಗೇರಿ (24) ಮೃತ ಪ್ರೇಮಿಗಳು.
ಇದೇ ಏಪ್ರಿಲ್ 4 ರಂದು ಬೇರೊಬ್ಬ ಯುವಕನೊಂದಿಗೆ ಲಲಿತಾಗೆ ಮದುವೆ ಮಾಡಲಾಗಿತ್ತು. ಹೀಗಾಗಿ ಮನನೊಂದ ಇಬ್ಬರು ಪ್ರೇಮಿಗಳು ನರೇಗಲ್ಲ ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ನೇಣು ಬಿಗಿದುಕೊಂಡಿದ್ದಾರೆ.
ಸ್ಥಳಕ್ಕೆ ನರೇಗಲ್ಲ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.