News Karnataka Kannada
Sunday, April 28 2024
ಗದಗ

ಸಹಾಯ ಯಾರು ಬೇಕಾದರೂ ಮಾಡಬಹುದು: ‘ನನ್ನ ಬಗ್ಗೆ ಅಸಹ್ಯ ಆಗಿದೆ’ ಎಂದ ಯಶ್​

ಬ್ಯಾನರ್​ ಕಟ್ಟಲು ಹೋದ ಅಭಿಮಾನಿಗಳು ನಿಧನರಾದ ಹಿನ್ನೆಲೆಯಲ್ಲಿ ಯಶ್​ ಅವರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ಮೃತರಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್ ಅವರ ಕುಟುಂಬದ ಸದಸ್ಯರನ್ನು ಯಶ್​ ಭೇಟಿ ಮಾಡಿದ್ದಾರೆ.
Photo Credit : News Kannada

ಗದಗ: ಬ್ಯಾನರ್​ ಕಟ್ಟಲು ಹೋದ ಅಭಿಮಾನಿಗಳು ನಿಧನರಾದ ಹಿನ್ನೆಲೆಯಲ್ಲಿ ಯಶ್​ ಅವರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ಮೃತರಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್ ಅವರ ಕುಟುಂಬದ ಸದಸ್ಯರನ್ನು ಯಶ್​ ಭೇಟಿ ಮಾಡಿದ್ದಾರೆ.

ಮೃತರ ತಂದೆ-ತಾಯಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಯಶ್​ ಅವರು, ಅಭಿಮಾನಿಗಳ ಸಾವಿನ ಬಗ್ಗೆ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ ನಿಧನರಾಗಿದ್ದಕ್ಕೆ ಯಶ್​ ಅವರಿಗೆ ತೀವ್ರ ನೋವಾಗಿದೆ.

‘ಬ್ಯಾನರ್​ ಹಾಕಿ ಅಭಿಮಾನ ವ್ಯಕ್ತಪಡಿಸಬೇಕು ಎಂಬುದನ್ನು ನಾವು ಯಾರೂ ಇಷ್ಟಪಡುವುದಿಲ್ಲ. ಪ್ರತಿ ವರ್ಷ ಬರ್ತ್​ಡೇ ಬಂದಾಗ ಇಂಥ ಒಂದು ಘಟನೆ ನಡೆದರೆ ಬರ್ತ್​ಡೇ ಎಂದರೆ ನನಗೆ ಭಯ ಬಂದಿದೆ. ನಿಜ ಹೇಳಬೇಕು ಎಂದರೆ ನನ್ನ ಬಗ್ಗೆ ನನಗೆ ಅಸಹ್ಯ ಆಗಿದೆ. ಎಲ್ಲಿಂದಲೋ ಅವರು ಪ್ರೀತಿಯಿಂದ ಹರಸಿದರೆ ಸಾಕು. ಇದೇ ನಿಜವಾದ ಬರ್ತ್​ಡೇ’ ಎಂದು ಯಶ್​ ಹೇಳಿದ್ದಾರೆ.

‘10-15 ದಿನ ಮುಂಚೆ ಕೊವಿಡ್​ ಅಂತ ಶುರು ಮಾಡಿದರು. ನಮ್ಮ ಬರ್ತ್​ಡೇಯಿಂದ ಯಾರಿಗೂ ತೊಂದರೆ ಆಗಬಾರದು ಅಂತ ನಾನು ಈ ವರ್ಷ ಎಲ್ಲರ ಜೊತೆ ಆಚರಣೆ ಬೇಡ ಅಂತ ನಿರ್ಧರಿಸಿದೆ. ಬೇಡ ಎಂದರೂ ಅಭಿಮಾನಿಗಳು ಬೇಜಾರು ಮಾಡಿಕೊಳ್ಳುತ್ತಾರೆ. ಸಹಾಯ ಯಾರು ಬೇಕಾದರೂ ಮಾಡಬಹುದು. ಮನೆಗೆ ಮಗ ಬರುತ್ತಾನಾ? ಕುಟುಂಬದಲ್ಲಿ ಮಕ್ಕಳನ್ನು ಕಳೆದುಕೊಂಡವರು ಏನು ಹೇಳಲು ಸಾಧ್ಯ? ನಮ್ಮ ಮನೆಗಳಲ್ಲಿ ಸಾವಾದರೂ ಹಾಗೆ ಅಲ್ಲವೇ? ಆ ಹುಡುಗರು ಇನ್ನೂ ಚಿಕ್ಕ ವಯಸ್ಸಿನವರು’ ಎಂದಿದ್ದಾರೆ ಯಶ್​.

‘ಈ ಮೂಲಕ ನಾನು ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ಬ್ಯಾನರ್​ ಕಟ್ಟುವುದು, ಬೈಕ್​ನಲ್ಲಿ ಚೇಸ್​ ಮಾಡುವುದನ್ನೆಲ್ಲ ಬಿಟ್ಟು ಬಿಡಿ. ನಿಜವಾಗಿಯೂ ನೀವು ಪ್ರೀತಿ ತೋರಿಸಬೇಕು ಎಂದರೆ ಒಳ್ಳೆಯ ಕೆಲಸ ಮಾಡಿ ನಿಮ್ಮ ಜೀವನದಲ್ಲಿ ಖುಷಿಯಾಗಿರಿ. ಅದೇ ಸಾಕು. ನನ್ನ ಬಗ್ಗೆ ಬೇಜಾರು ಮಾಡಿಕೊಂಡರೂ ಪರವಾಗಿಲ್ಲ ಅಂತ ನಾನು ದೂರ ಇರುತ್ತೇನೆ. ಪ್ರತಿಯೊಬ್ಬ ಅಭಿಮಾನಿಯೂ ಅವರವರ ಬದುಕಿನಲ್ಲಿ ಬೆಳೆದರೆ ಅದೇ ನಮಗೆ ಅವರು ಅಭಿಮಾನ ತೋರಿಸಿದಂತೆ’ ಎಂದು ಯಶ್​ ಹೇಳಿದ್ದಾರೆ. ಈಗ ನಾನು ಪರಿಹಾರ ಘೋಷಣೆ ಮಾಡುವುದು ದೊಡ್ಡ ವಿಷಯ ಅಲ್ಲ. ಏನು ಬೇಕಾದರೂ ನಾನು ಮಾತಾಡಬಹುದು. ಆದರೆ ನಿಜವಾಗಿ ಇವರ ಕುಟುಂಬಕ್ಕೆ ಏನು ಅವಶ್ಯಕತೆ ಇದೆಯೋ ಅದನ್ನು ಮಾಡೋಣ. ಅವರ ಕುಟುಂಬಕ್ಕೆ ಮಾಡಬೇಕಾಗಿದ್ದನ್ನು ನಾನು ಮಾಡುತ್ತೇನೆ ಎಂದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು