News Karnataka Kannada
Monday, April 29 2024
ಹಾವೇರಿ

ಅಲ್ಪಸಂಖ್ಯಾತರ ಕಾನೂನು ಪದವೀಧರಿಂದ, ಕಾನೂನು ತರಬೇತಿಗೆ ಅರ್ಜಿ ಆಹ್ವಾನ

Law
Photo Credit :

ಹಾವೇರಿ : ಪ್ರಸಕ್ತ 2021-22ನೇ ಸಾಲಿನಲ್ಲಿ ಜಿಲ್ಲೆಯ ಮೂರು ಜನ ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ನಾಲ್ಕು ವರ್ಷಗಳ ಕಾನೂನು ತರಬೇತಿಗೆ ಅಲ್ಪಸಂಖ್ಯಾತರ ಕಾನೂನು ಪದವೀಧರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಹಾವೇರಿ ಜಿಲ್ಲೆಯ ನಿವಾಸಿಯಾಗಿದ್ದು, 30 ವರ್ಷದೊಳಗಿರಬೇಕು ಹಾಗೂ ಮುಸ್ಲಿಂ, ಜೈನ್, ಬೌದ್ಧ, ಪಾರ್ಸಿ, ಸಿಖ್, ಕ್ರಿಶ್ಚಿಯನ್ ಹಾಗೂ ಆಂಗ್ಲೋ ಇಂಡಿಯನ್‍ಗೆ ಸೇರಿರಬೇಕು. ಜಿಲ್ಲಾಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ತರಬೇತಿಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಮಾಹೆಯಾನ ರೂ.5000 ರಂತೆ ತರಬೇತಿ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳು ಬಾರ ಕೌನ್ಸಿಲ್‍ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿರಬೇಕು ಹಾಗೂ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹಿಂದೆ 2 ಅಥವಾ 3 ವರ್ಷದೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಈ ಬಗ್ಗೆ ಅಂಕಪಟ್ಟಿ ವಿಶ್ವವಿದ್ಯಾಯಲದಿಂದ ಪಡೆದ ಪಾಸಿಂಗ್ ಸರ್ಟಿಫಿಕೆಟ್ ಲಗತ್ತಿಸತಕ್ಕದ್ದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ ಸರ್ಕಾರಿ ವಕೀಲರು ಅಥವಾ ಕನಿಷ್ಠ 20 ವರ್ಷಗಳ ವಕೀಲ ವೃತ್ತಿಯಲ್ಲಿ ಅನುಭವವುಳ್ಳ ಯಾವುದೇ ಹಿರಿಯ ವಕೀಲರ ಅಧೀನದಲ್ಲಿ ತರಬೇತಿಗೆ ನಿಯೋಜಿಸಲಾಗುವುದು.

ಅಭ್ಯರ್ಥಿಯು ಸುಳ್ಳು ದಾಖಲೆ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ವಾರ್ಷಿಕ ಆದಾಯ ರೂ.3.50 ಲಕ್ಷಗಳಿಗೆ ಮೀರಿರಬಾರದು. ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಹಾಗೂ ಕಾನೂನು ಪದವಿಯಲ್ಲಿ ಪಡೆದ ಅಂಕಪಟ್ಟಿಗಳನ್ನು ಪ್ರಮಾಣ ಪತ್ರದ ಧೃಡೀಕರಣ ಪ್ರತಿಗಳನ್ನು ಲಗತ್ತಿಸಬೇಕು.

ಆಸಕ್ತರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಅಲ್ಪಸಂಖ್ಯಾತರ ಮೌಲಾನಾ ಅಜಾದ ಭವನ, (ಶಿವಾಜಿನಗರ 3ನೇ ಕ್ರಾಸ್) ಈ ವಿಳಾಸದಲ್ಲಿ ಪಡೆದು ಭರ್ತಿ ಮಾಡಿ ಅರ್ಜಿಯನ್ನು ದಿನಾಂಕ 15-11-2021ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಾವೇರಿ, ಬ್ಯಾಡಗಿ, ರಾಣೇಬೆನ್ನೂರ, ಹಾನಗಲ್, ಹಿರೇಕೆರೂರ, ಶಿಗ್ಗಾಂವ ಮತ್ತು ಸವಣೂರು ತಾಲೂಕು ಮಾಹಿತಿ ಕೇಂದ್ರಗಳಿಗೆ ಅಥವಾ ದೂರವಾಣಿ ಸಂಖ್ಯೆ 08375-234505ಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು