News Karnataka Kannada
Thursday, May 09 2024
ಹಾವೇರಿ

ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅಂತ ಗೊತ್ತಿಲ್ಲ : ಬಸವರಾಜ ಬೊಮ್ಮಾಯಿ

C M Basavaraj Bommai
Photo Credit :

ಹಾವೇರಿ: ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅಂತ ಗೊತ್ತಿಲ್ಲ ಅಂತ ಸಿಎಂ ಬಸವರಾಜ ಬೊಮ್ಮಾಯಿ ಅಂತ ಹೇಳಿದ್ದಾರೆ. ಅವರು ಇಂದು ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭಕ್ಕೆ ಜನತೆಯನ್ನು ಉದ್ದೇಶೀಸಿ ಮಾತನಾಡಿದರು, ಇದೇ ವೇಳೆ ಅವರು ಮಾತನ್ನು ಮುಂದುವರೆಸಿ, ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ.

ಸ್ಥಾನಮಾನಗಳು ಶಾಶ್ವತವಲ್ಲ ಅಂತ ಭಾವುಕ ಮಾತುಗಳನ್ನು ಆಡಿದರು. ಇನ್ನೂ ಇದೇ ವೇಳೆ ಸಿಎಂ ಕ್ಷೇತ್ರದ ಹೊರಗಡೆ ಇದ್ದಾಗ ನಾನು ಸಿಎಂ, ಗೃಹ ಸಚಿವ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ಬಸವರಾಜ ಬೊಮ್ಮಾಯಿ ಆಗಿ ಉಳಿಯುತ್ತೇನೆ. ನಾನು ನಿಮ್ಮೂರಿಗೆ ಬಂದಾಗ ರೊಟ್ಟಿ ತಿನ್ನಿಸಿದ್ದೀರಿ, ನವಣಿ ಅಕ್ಕಿ ಅನ್ನ ಮಾಡಿ ಹಾಕಿದ್ದೀರಿ. ನಾನೇನು ಕೆಲಸ ಮಾಡಿದ್ರೂ ಆ ಋಣ ತೀರಿಸಲು ಆಗೋದಿಲ್ಲ ಅಂತ ಹೇಳಿದರು. ಇದು ಸಂತರ ನಾಡು, ಇಲ್ಲಿ ವೈಚಾರಿಕ ಕ್ರಾಂತಿಯನ್ನ ಮಾಡಿದ ಗುರುಗಳಿದ್ದಾರೆ. ಕನಕದಾಸರು, ಸಂತ ಶಿಶುನಾಳ ಶರೀಫರು ಇದ್ದ ತಾಲೂಕು ಅಂತ ಸಿಎಂ ಹೇಳಿದರು.

ಪಂಚಮಸಾಲಿ ಸಮಾಜಕ್ಕೆ 2ಎ ನೀಡುವ ಬಗ್ಗೆ ಈಗಾಗಲೇ ಸಭೆಯಲ್ಲಿ ಹೇಳಿದ್ದೇನೆ. ಹಿಂದುಳಿದ ವರ್ಗದ ಆಯೋಗಕ್ಕೆ ಸಹಕಾರ ಕೊಡಿ. ಈ ನಾಡಿದ ಬಹುತೇಕ ಜನರಿಗಾಗಿ ಒಳ್ಳೆಯ ದಿನಗಳು, ನ್ಯಾಯ ಕೊಡಲು ನಿರ್ಣಯ ತೆಗೆದುಕೊಳ್ಳುತ್ತೇವೆ. ನನಗೆ ಶಿಗ್ಗಾಂವಿ-ಸವಣೂರು ಏತ ನೀರಾವರಿ ಯೋಜನೆಯ ಕೆರೆ ತುಂಬಿಸೋ ಕೆಲಸ ಮಾಡಬೇಕು ಅಂತಾ ಇತ್ತು. ಅದು ಪೂರ್ಣವಾಗಿದೆ ಅಂತ ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು