ಹಿರೇಕೆರೂರು : ನೆಹರು ಕುಟುಂಬದವರನ್ನು ಹೊಗಳದೇ ಇದ್ದರೆ ಡಿ.ಕೆ.ಶಿವಕುಮಾರ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪುತ್ತದೆ . ಹೀಗಾಗಿ ಅವರನ್ನು ಹೊಗಳಿಕೊಂಡು ಹೋಗುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದರು.
ತಾಲೂಕಿನ ಬಸರಿಹಳ್ಳಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ ತಂದು ಕೊಡಲು ಭಾರತದ ಎಲ್ಲರೂ ಶ್ರಮಿಸಿದ್ದಾರೆ. ಸ್ವಾತಂತ್ರ ಹೋರಾಟ ಪಕ್ಷಗಳ ಆಧಾರದಲ್ಲಿ ನಡೆದಿಲ್ಲ. ಸ್ವಾತಂತ್ರ ನಂತರ ನೆಹರು ಅವರು ಮುಂಚೂಣಿಗೆ ಬಂದು ಪ್ರಧಾನಿಯಾಗಿದ್ದಾರೆ. ಒಬ್ಬರಿಂದಲೇ ಸ್ವಾತಂತ್ರ್ಯ ಬಂದಿಲ್ಲ. ಸ್ವಾತಂತ್ರ್ಯದ ಸಮಯದಲ್ಲಿ ಯಾವುದೇ ಪಕ್ಷ, ಪಂಗಡಗಳು, ರಾಜಕೀಯ ಇರಲಿಲ್ಲ. ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಸಂದರ್ಭದಲ್ಲಿ ಪ್ರತಿಯೊಬ್ಬ ಪ್ರಜೆ ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು ಹೋರಾಟ ಮಾಡಿದ್ದಾರೆ ಎಂದರು.