ಹಾವೇರಿ: ಭಾನುವಾರ ಜಿಲ್ಲೆಗೆ ಕೇಂದ್ರ ಸರ್ಕಾರದ ಅತಿವೃಷ್ಟಿ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡದೆ ಶಿಗ್ಗಾಂವ, ಹಾನಗಲ್, ಹಾವೇರಿ,ಸವಣೂರ, ರಾಣೇಬೆನ್ನೂರ ಹಾಗೂ ಹಿರೇಕೆರೂರು ತಾಲೂಕಿನ ಹಾನಿಪೀಡಿತ ಆಯ್ದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಭಾರತ ಸರ್ಕಾರದ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಮಂತ್ರಾಲಯದ ಮುಖ್ಯ ಅಭಿಯಂತರ ಎಸ್.ವಿ. ಜಯಕುಮಾರ, ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದ ಅಂಡರ್ ಸೇಕ್ರೆಟರಿ ಕೈಲಾಶ್ ಸಂಖ್ಲಾ ಅವರನ್ನು ಒಳಗೊಂಡ ಅಂತರ ಸಚಿವಾಲಯದ ಅಧ್ಯಯನ ತಂಡ ಶಿಗ್ಗಾಂವ ತಹಶೀಲ್ದಾರ ಕಚೇರಿಗೆ ಆಗಮಿಸಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯ ಕುರಿತು ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಹಾನಿಯ ಮಾಹಿತಿ ಕುರಿತಂತೆ ಕೇಂದ್ರ ತಂಡಕ್ಕೆ ವಿವರಿಸಿದರು.
ಸಭೆಯಲ್ಲಿ ಜಿ ಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮಹಮ್ಮದ್ ರೋಷನ್ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮವರ, ಕೃಷಿ ಜಂಟಿ ನಿರ್ದೇಶಕ ಬಿ. ಮಂಜುನಾಥ್, ತೋಟಗಾರಿಕೆ ಉಪನಿರ್ದೇಶಕ ಪ್ರದೀಪ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಸತೀಶ್ ಜಾಗೀರದಾರ್, ಜಿಲ್ಲಾ ಪಂಚಾಯತ್ ಇಂಜನೀಯರಿಂಗ್ ವಿಭಾಗದ ಚನ್ನವೀರಗೌಡ್ರ ಬಸವರಾಜ ಉಪಸ್ಥಿತರಿದ್ದರು