News Karnataka Kannada
Monday, April 29 2024
ಹಾವೇರಿ

ಹಾವೇರಿಯಲ್ಲಿ ಭೀಕರ ಅಪಘಾತ: 2 ಮಕ್ಕಳು ಸೇರಿ 3 ಸಾವು

8 passengers seriously injured in private bus accident
Photo Credit :

ಹಾವೇರಿ : ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಶಿಕ್ಷಕ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ರಾಣೇಬೆನ್ನೂರು ನಗರದ ನಿವಾಸಿ, ಶಿಕ್ಷಕ ಜಯಪ್ರಕಾಶ್​(48) ಹಾಗೂ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಶಾಲಿನಿ(8) ಮತ್ತು ಯಶೋದಾ(8) ಮೃತ ದುರ್ದೈವಿಗಳು.

ಜಯಪ್ರಕಾಶ್​ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಮಕ್ಕಳಾದ ಶಾಲಿನಿ ಮತ್ತು ಯಶೋದಾ ಇಬ್ಬರೂ ಸುತ್ತಕೋಟಿ ಗ್ರಾಮದ ರಸ್ತೆಬದಿಯ ಜಮೀನೊಂದರಲ್ಲಿ ಆಟವಾಡುತ್ತಾ ಕೂತಿದ್ದರು. ಜವರಾಯನಂತೆ ಬಂದ ಕಾರು, ಏನೂ ಅರಿಯದ ಮಕ್ಕಳ ಮೇಲೆ ಹರಿದು ಪ್ರಾಣ ತೆಗೆದಿದೆ. ಕಾರಿನಲ್ಲಿದ್ದ ಶಿಕ್ಷಕರೂ ದುರಂತ ಅಂತ್ಯ ಕಂಡಿದ್ದಾರೆ.

ಸುತ್ತಕೋಟಿ ಗ್ರಾಮದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಜಮೀನಿನತ್ತ ನುಗ್ಗಿದೆ, ಅಲ್ಲೇ ಆಟವಾಡುತ್ತಿದ್ದ ಮಕ್ಕಳ ಮೇಲೆ ಹರಿದು, ಮರಕ್ಕೆ ಹೋಗಿ ಡಿಕ್ಕಿ ಹೊಡೆದಿದೆ. ಮರಕ್ಕೆ ಕಾರು ಡಿಕ್ಕಿಯಾದ ರಭಸಕ್ಕೆ ಗಂಭೀರ ಗಾಯಗೊಂಡ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟರು. ಅತ್ತ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ನರಳಾಡುತ್ತಿದ್ದ ಮಕ್ಕಳನ್ನು ಗ್ರಾಮಸ್ಥರು ತಕ್ಷಣ ಹಿರೇಕೆರೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದರಾದರೂ ಮಕ್ಕಳು ಬದುಕಲಿಲ್ಲ.

ಸ್ಥಳಕ್ಕೆ ಭೇಟಿ ನೀಡಿದ ಹಂಸಭಾವಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗ್ಗೆ ಎದ್ದ ಕೂಡಲೇ ತಮ್ಮ ಪಾಡಿಗೆ ಆಟವಾಡಿಕೊಂಡಿದ್ದ ಮಕ್ಕಳ ಸಾವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು