ದಾವಣಗೆರೆ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ ಪ್ರಥಮ ಬಾರಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವವರ ಹೆಸರು ನೋಂದಣಿ ಹಾಗೂ ಮಾಹಿತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತು ‘ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿ’ ಎಂಬ ಹೊಸ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ ನಡೆಯಲಿದೆ.
ನೋಂದಣಿ ವಿಭಾಗವನ್ನು ಅಪ್ಲಿಕೇಶನ್ನ ಮುಖಪುಟದಲ್ಲಿ ಇರಿಸಲಾಗಿದೆ. ಇದಲ್ಲದೇ ಕನ್ನಡನಾಡಿನ ಇತಿಹಾಸ, ರಾಜ್ಯದಲ್ಲಿ ಇದುವರೆಗೆ ನಡೆದ ಸಾಹಿತ್ಯ ಸಮ್ಮೇಳನಗಳ ವಿವರ, ಸಮ್ಮೇಳನಾಧ್ಯಕ್ಷರ ವಿವರ ನೀಡಲಾಗಿದೆ.
ಒಳಪುಟದಲ್ಲಿ ಸಹಾಯವಾಣಿ, ಅಧಿವೇಶನಗಳ ವಿವರಗಳು, ಸಮ್ಮೇಳನದ ನೀಲನಕ್ಷೆ, ಸಂಪರ್ಕಗಳು ಮತ್ತು ಇತರ ವಿಭಾಗಗಳನ್ನು ತೆರೆಯಲಾಗಿದೆ. ಪ್ರತಿನಿಧಿ ನೋಂದಣಿ ಗುರುವಾರ ಡಿಸೆಂಬರ್ 1 ರಂದು ಮಧ್ಯಾಹ್ನ 12.00 ಗಂಟೆಗೆ ಪ್ರಾರಂಭವಾಯಿತು. ಡಿಸೆಂಬರ್ 18ರ ವರೆಗೆ ನಡೆಯಲಿದ್ದು, ಮೊದಲು ನೋಂದಣಿ ಮಾಡಿಕೊಂಡವರಿಗೆ ಆದ್ಯತೆ ನೀಡಲಾಗುವುದು. ನೋಂದಣಿ ಶುಲ್ಕ ರೂ. 500 ಅನ್ನು ಆನ್ಲೈನ್ನಲ್ಲಿ ಪಾವತಿಸಬೇಕು.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…