ಹಾವೇರಿ: ಪ್ರಧಾನಿ ಮೋದಿ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಾಯ್ಸ್ ಮೆಸೆಜ್ ಕಳುಸಿದ್ದ ಯುವಕನ ವಿರುದ್ಧ ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವ್ಯಕ್ತಿಯನ್ನು ಸಾಧಿಕ್ ದಾಲ್ ರೊಟ್ಟಿ (26ವರ್ಷ) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸುವಂತೆ ಹಿಂದೂ ಕಾರ್ಯಕರ್ತರ ಒತ್ತಾಯಿಸಿದರು.
ಈ ಘಟನೆ ಜ.23ರ ಸಾಯಂಕಾಲ ನಡೆದಿದ್ದು, ಈತ ರಾಣೇಬೆನ್ನೂರು ತಾಲೂಕಿನ ಹೆಡಿಯಾಲ ಗ್ರಾಮದ ಯೋಗೇಶ ಷಣ್ಮುಖಪ್ಪ ತೋಟಗೇರ ಎಂಬುವರಿಗೆ ವಾಯ್ಸ್ ಮೆಸೆಜ್ ಕಳುಹಿಸಿದ್ದಾನೆ. ಅಲ್ಲದೇ ಶ್ರೀರಾಮ ಮಂದಿರ ಭಾವಚಿತ್ರದ ಮೇಲೆ ಅಲ್ಲಾ ಹು ಅಕ್ಬರ್ ಅಂತ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ ಎನ್ನಲಾಗಿದೆ.
ಶಿವನಗೌಡ ಮುಲ್ಕಿಗೌಡರ ಎಂಬುವರು ಈ ಬಗ್ಗೆ ಹಲಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.