News Karnataka Kannada
Monday, April 29 2024
ಹಾವೇರಿ

ಬಿಜೆಪಿ ಪಕ್ಷವನ್ನು ಈಶ್ವರಪ್ಪ ಕಟ್ಟಿ ಬೆಳೆಸಿದ್ದಾರೆ: ಬಸವರಾಜ ಬೊಮ್ಮಾಯಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ  ಈಶ್ವರಪ್ಪ ಪಕ್ಷೇತರವಾಗಿ ನಿಲ್ಲುತ್ತಿರುವ ವಿಚಾರ ನನಗೆ ಗೊತ್ತಿಲ್ಲ. ವರಿಷ್ಠರು ಜೊತೆಗೆ ಮಾತನಾಡಿ ಮನವೊಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Photo Credit : News Kannada

ಹಾವೇರಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ  ಈಶ್ವರಪ್ಪ ಪಕ್ಷೇತರವಾಗಿ ನಿಲ್ಲುತ್ತಿರುವ ವಿಚಾರ ನನಗೆ ಗೊತ್ತಿಲ್ಲ. ವರಿಷ್ಠರು ಜೊತೆಗೆ ಮಾತನಾಡಿ ಮನವೊಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ಈಶ್ವರಪ್ಪ ಕಟ್ಟಿ ಬೆಳೆಸಿದ್ದಾರೆ. ಅವರು ಶಿಸ್ತಿನ ಸಿಪಾಯಿ ಆಗಿದ್ದು, ಬಿಜೆಪಿ ಸಂಸದಿಯ ಮಂಡಳಿಯಲ್ಲಿ ಏನೇನು ನಡೆದಿದೆ ಅದೆಲ್ಲವೂ ಈಶ್ವರಪ್ಪನವರಿಗೆ ತಿಳಿದಿದೆ ಎಂದರು.

ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದು ಹೇಳಿದ್ದೆ. ಮೊದಲು ನನ್ನ ಹೆಸರು ಇರಲಿಲ್ಲ. ಆದರೆ ನಾನು ಚುನಾವಣೆಗೆ ನಿಲ್ಲಬೇಕು ಎನ್ನುವುದು ವರಿಷ್ಠರ ತೀರ್ಮಾನ. ನಾನು ಮೋಸ ಮಾಡಿಲ್ಲ ಎಂದು ಹೇಳಿದರು.

ಶಿಗ್ಗಾವಿ ಉಪಚುನಾವಣೆ ನಡೆದರೆ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್‌ ಸಿಗುತ್ತಾ ಎಂಬ ಪ್ರಶ್ನೆಗೆ, ಈಗ ನಾನಿನ್ನೂ ಸ್ಪರ್ಧೆ ಮಾಡಿ ಲೋಕಸಭಾ ಚುನಾವಣೆ ಗೆಲ್ಲಬೇಕು. ಬಳಿಕ ಶಿಗ್ಗಾವಿಗೆ ಉಪಚುನಾವಣೆ ನಡೆಯಲಿದೆ. ಊಹೆ ಮಾಡಿ ನಾನು ಹೇಳಲು ಸಾಧ್ಯವಿಲ್ಲ. ಆ ಸಂದರ್ಭದಲ್ಲಿ ಜನರ ಅಭಿಪ್ರಾಯ, ಪಕ್ಷದ ಕೇಳಬೇಕು ಎಂದು ಉತ್ತರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ಅಮಿತ್‌ ಶಾ ತಿಳಿಸಿದ ಬಳಿಕ ನಾನು ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಮಾಡಬೇಕಾಯಿತು ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು