ಹಾವೇರಿ: ಮಳೆರಾಯನ ಮುನಿಸಿನಿಂದ ನೆಲ ಕಾದ ಹಂಚಂತಾಗಿದೆ.ನೀರಿಲ್ಲದೆ ಬರಗಾಲ ಬಂದು ಹೊಕ್ಕಿದೆ. ಇತ್ತ ರೈತ ಮಳೆರಾಯನ ಮುನಿಸಿನಿಂದ ಬೆಳೆಗಳನ್ನು ಕಾಪಡಿಕೊಳ್ಳಲು ಹರಸಾಹಸ ಪಡುತ್ತಿದ್ದಾನೆ ಇನ್ನೊಂದೆಡೆ ಕುಡಿಯಲು ನೀರಿಲ್ಲದೆ ಪರಿತಪಿಸುತ್ತಿದ್ದಾನೆ. ಪ್ರಾಣಿ, ಪಕ್ಷಿಗಳ ಒದ್ದಾಟ ಹೇಳತೀರದು ನೀರಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತಿವೆಯೊ ಎಂಬಂತೆ ಕೂಗಾಡುತ್ತ ಇವೆ. ಇಂತಹ ಸಮಯದಲ್ಲಿ ರೈತನೊಬ್ಬ ವರದಾ ನದಿಯನ್ನು ತುಂಬಿಸುವ ಮೂಲಕ ಪ್ರಾಣಿ ಪಕ್ಷಿಗಳ ದಾಹ ನೀಗಿಸುವ ಪ್ರಯತ್ನಕ್ಕೆ ಇಳಿದಿದ್ದಾನೆ.
ತಾಲ್ಲೂಕಿನ ಸಂಗೂರು ಗ್ರಾಮದ ರೈತ ಭುವನೇಶ್ವರ ಸ್ವಂತ ಹಣದಿಂದ ಪ್ರಾಣಿ, ಪಕ್ಷಿಗಳ ದಾಹ ತೀರಿಸಲು ಮುಂದಾಗಿದ್ದಾರೆ. ಮಳೆಗಾಲದಲ್ಲಿ ಮೈದುಂಬಿ ಹರಿಯುತ್ತಿದ್ದ ವರದಾ ನದಿ ಮಳೆ ಇಲ್ಲದೆ ಬರಿದಾಗಿದೆ. ಬರೋಬ್ಬರಿ 1 ಲಕ್ಷದ 60 ಸಾವಿರ ರೂಪಾಯಿ ಖರ್ಚು ಮಾಡಿ ಬೋರ್ವೆಲ್ ಕೊರೆಸಿ ನೀರನ್ನು ನೇರವಾಗಿ ಸಂಗೂರು ಗ್ರಾಮದ ಪಕ್ಕದಲ್ಲಿರುವ ವರದಾ ನದಿಗೆ ಬಿಡುತ್ತಿದ್ದಾರೆ.
ದಿನಕ್ಕೆ ಆರು ತಾಸಿನಂತೆ ಕಳೆದ ಐದು ದಿನಗಳಿಂದ ನಿರಂತರ ನೀರು ವರದಾ ನದಿಗೆ ಬಿಡಲಾಗುತ್ತಿದೆ. ಈಗಾಗಲೇ ಅರ್ಧ ಅಡಿಯಷ್ಟು ನದಿಯಲ್ಲಿ ಸಂಗ್ರಹವಾಗಿದೆ. ಇದರಿಂದಾಗಿ ವರದಾ ನದಿಯ ನೀರಿನ ಮೇಲೆ ಅವಲಂಬಿಸಿರುವ ಸಾವಿರಾರು ಪಕ್ಷಿಗಳಿಗೆ ಅನುಕೂಲವಾಗಿದೆ.ಜಿಲ್ಲೆಯಾದ್ಯಂತ ರೈತ ಮಾಡಿರುವ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತದೆ, ಅಲ್ಲದೆ ರೈತನ ಕಾರ್ಯಕ್ಕೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಏನೆ ಆಗಲಿ ರೈತನ ಸಹಾಯಕ್ಕೆ ಮತ್ತು ಆತನ ಹರಸಾಹಸಕ್ಕೆ ತಲೆಬಾಗಲೇಬೇಕು.
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ