ಹಾವೇರಿ: ಹಿಂದುತ್ವದ ಭಾಷಣ ಮಾಡುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಾನು ಮುಂದೊಂದು ದಿನ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ಬಗ್ಗೆ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಹಾವೇರಿ ಕಾ ರಾಜ್ ಗಣಪತಿ ಉತ್ಸವ ಸಮಿತಿ ಆಯೋಜನೆ ಹಿಂದೂ ಜನ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, “ಒಂದಿಲ್ಲ ಒಂದು ದಿವಸ ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ. ಒಂದಲ್ಲಾ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ” ಎಂದಿದ್ದಾರೆ.
2024ರ ಚುನಾವಣೆಯಲ್ಲಿ ಮತ್ತೆ ಮೊದಿಯನ್ನು ಬೆಂಬಲಿಸಬೇಕು. ಮುಂದಿನ 25 ವರ್ಷ ದೇಶ ನಮ್ಮ ಕೈಯಲ್ಲೇ ಇರುತ್ತದೆ. ಇಂದು ಹಸಿರು ಬಾವುಟ ಹಾರಿಸೋಕೆ ಒಡಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಹಸಿರು ಬಾವುಟನೇ ಇಲ್ದಂಗೆ ಮಾಡ್ತೀವಿ. ಕೆಲ ಸ್ವಾಮೀಜಿಗಳು ಸನಾತನ ಧರ್ಮ ಉಳಿಸುವ ಕೆಲಸ ಮಾಡುತ್ತಿಲ್ಲ. ಧರ್ಮ ಉಳಿಸುವ ಕೆಲಸ ಮಾಡಬೇಕಾದವರು ಮಂತ್ರಿ ಮಾಡಿ ಮುಖ್ಯಮಂತ್ರಿ ಮಾಡಿ ಅಂತಾ ಲಾಬಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.