News Karnataka Kannada
Monday, April 29 2024
ಹಾವೇರಿ

ಹಾವೇರಿಯಲ್ಲಿ ನೈತಿಕ ಪೊಲೀಸ್ ಗಿರಿ: 7 ಜನರ ಬಂಧನ

ಹಿಂದೂ ವ್ಯಕ್ತಿಯೊಬ್ಬನ ಜೊತೆ ಮುಸ್ಲಿಂ ಯುವತಿಯ ಕಾಣಿಸಿಕೊಂಡಿದ್ದರು ಎಂಬ ಕಾರಣಕ್ಕೆ ಯುವತಿಯ ಮೇಲೆ ಮುಸ್ಲಿಂ ಯುವಕರ  ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬ್ಯಾಡಗಿ ಪಟ್ಟಣದ ಪುರಸಭೆಯ ಬಳಿಯ ಶಿವನ ದೇವಸ್ಥಾನದ ಬಳಿ ನಡೆದಿದೆ.
Photo Credit : News Kannada

ಹಾವೇರಿ:  ಹಿಂದೂ ವ್ಯಕ್ತಿಯೊಬ್ಬನ ಜೊತೆ ಮುಸ್ಲಿಂ ಯುವತಿಯ ಕಾಣಿಸಿಕೊಂಡಿದ್ದರು ಎಂಬ ಕಾರಣಕ್ಕೆ ಯುವತಿಯ ಮೇಲೆ ಮುಸ್ಲಿಂ ಯುವಕರ  ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬ್ಯಾಡಗಿ ಪಟ್ಟಣದ ಪುರಸಭೆಯ ಬಳಿಯ ಶಿವನ ದೇವಸ್ಥಾನದ ಬಳಿ ನಡೆದಿದೆ.

ಹಲ್ಲೆಗೊಳಗಾದ ಮುಸ್ಲಿಂ ಯುವತಿ ಬ್ಯಾಡಗಿ ತಾಲೂಕು ಅಗಸನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದರು. ತಮ್ಮ ಜೊತೆ ಕೆಲಸ ಮಾಡ್ತಿದ್ದ ಜಗದೀಶ್ ಎಂಬ ವ್ಯಕ್ತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ.

ನೀನು ಯಾಕೆ ಇವನ ಜೊತೆ ಬೈಕ್ ನಲ್ಲಿ ಬಂದೆ? ಎಂದು ಪ್ರಶ್ನಿಸಿ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿ ಯುವತಿಯನ್ನ ಎಳೆದಾಡಿ ಕಪಾಳಕ್ಕೆ ಹೊಡೆದು ಸಾರ್ವಜನಿಕ ಸ್ಥಳದಲ್ಲಿ ಅವಮಾನ ಮಾಡಿದ್ದಾರೆ. ಜೀವ ಬೆದರಿಕೆಯನ್ನೂ ಹಾಕಿದ್ದಾರೆಂದು ಆಕೆ ಪ್ರಕರಣ ದಾಖಲಿಸಿದ್ದಾರೆ.

ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ, 7 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನ ಅಬ್ದುಲ್ ಖಾದರ್ ಮುದಗಲ್, ಮನ್ಸೂರ್ ತಾಂಡೂರು, ಮೆಹಬೂಬಖಾನ್ ಬಡಿಗೇರ, ರೀಯಾಜ್,ಅಲ್ಪಾಜ್ ಬಳಿಗಾರ, ಅಬ್ದುಲ್ ದೇಸೂರ, ಖಾದರ್ ಕಣಕೆ, ಸಲೀಂ ಸಾಬ್ ಖಾಜಿ, ಮಹಬೂಬ್ ಅಲಿ ಹಲಗೇರಿ ಆರೋಪಿಗಳು ಎಂದು ಗುರುತಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು