ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ಕೆರೂರು ಗ್ರಾಮದ ಬಾಳುಮಾಮಾ ಜಾತ್ರೆಯಲ್ಲಿ ಸಾವಿರಾರು ಜನ ನಿನ್ನೆ(ಮೇ.29) ಪ್ರಸಾದ ಸೇವಿಸಿದ್ದರು. ಸಂಜೆ ಊಟ ಮಾಡಿದ ಬಳಿಕ ವಾಂತಿ-ಭೇದಿ ಶುರುವಾಗಿದೆ. ಇದು ತಿಳಿಯದೇ ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನು 200ಕ್ಕೂ ಹೆಚ್ಚು ಜನ ರಾತ್ರಿಯೂ ಸೇವಿಸಿದ್ದರು.
30 ಜನರಿಗೆ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ, 10 ಜನರಿಗೆ ಕೆರೂರಿನ ಅಂಗವಾಡಿಯಲ್ಲಿ ಹಾಗೂ 10 ಜನರಿಗೆ ಯಕ್ಸಂಬಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯಕೀಯ ತಂಡ ಗ್ರಾಮದಲ್ಲೇ ಬಿಡುಬಿಟ್ಟಿದೆ.
Ad