News Karnataka Kannada
Monday, April 29 2024
ಬೆಳಗಾವಿ

ಆದಷ್ಟು ಬೇಗ ನಿನ್ನ ಭಕ್ತಾದಿಗಳಿಗೆ ನಿನ್ನ ತಿಥಿ ಬಗ್ಗೆ ಹೇಳು: ನಿಜಗುಣ ಶ್ರೀಗಳಿಗೆ ಬೆದರಿಕೆ ಪತ್ರ

Tell your devotees about your tithi as soon as possible: Threat letter to Nijaguna Sri
Photo Credit : News Kannada

ಬೆಳಗಾವಿ: ನಿಜಗುಣಾನಂದ ನಿನ್ನ ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಆ.8ರಂದು ಪತ್ರ ಬಂದಿದ್ದರೂ ತಡವಾಗಿ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವಾಮೀಜಿಗಳು ದೂರು ದಾಖಲಿಸಿಲ್ಲ.

2020ರಲ್ಲಿ ಕೂಡ ಶ್ರೀಗಳಿಗೆ ಇದೇ ರೀತಿಯ ಕೊಲೆ ಬೆದರಿಕೆ ಪತ್ರವನ್ನು ಮಠದ ವಿಳಾಸಕ್ಕೆ ತಲುಪಿಸಲಾಗಿತ್ತು, ಈಗ ಪತ್ರ ಬರೆದ ವ್ಯಕ್ತಿ 2020ರ ಸಂಗತಿಯನ್ನೂ ಪತ್ರದಲ್ಲಿ ತಿಳಿಸಿದ್ದಾನೆ. `ನಮ್ಮ ಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆ ಬರಲಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಕೊನೆಯಲ್ಲಿ ‘ಓಂ ಶ್ರೀ ಕಾಳಿಕಾದೇವಿ ನಮಃ’ ‘ಸಹಿಷ್ಣು ಹಿಂದೂ’ ಎಂದು ಬರೆಯಲಾಗಿದೆ.

ಏನೆಂದು ಪತ್ರದಲ್ಲಿದೆ: ನಿಜಗುಣಾನಂದ ನಿನ್ನ ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ, ನಿನ್ನ ಪಾಪದ ಮಾತಿನ ಕೊಡ ತುಂಬಿದೆ, ಆದಷ್ಟು ಬೇಗ ನಿನ್ನ ಭಕ್ತಾದಿಗಳಿಗೆ ನಿನ್ನ ತಿಥಿ ಬಗ್ಗೆ ಹೇಳು, ನಮ್ಮ ಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಪತ್ತೆಯೇ ಬರುತ್ತದೆ. ನಿನ್ನ ಅಂತಿಮ ದಿನಗಳು ಪ್ರಾರಂಭವಾಗಿವೆ. ದಿನಗಳನ್ನು ಎಣಿಸು, ಓಂ ಶ್ರೀ ಕಾಳಿಕಾದೇವಿ ನಮಃ, ಓಂ ಶ್ರೀ ಕಾಳಿಕಾದೇವಿ ನಮಃ’ ಎಂದು ಬಿಳಿ ಹಾಳೆಯಲ್ಲಿ ಬರೆದು, ಅದನ್ನು ಪ್ಯಾಕೇಟ್‌ನಲ್ಲಿ ಇಟ್ಟು ಕಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು