ಬೆಳಗಾವಿ: ರಾಜ್ಯ ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಡುವುದರಲ್ಲಿ ತಪ್ಪೆನಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಹುಬ್ಬಳ್ಳಿಯ ಸಮಾವೇಶದಲ್ಲಿ ತಾವು ನೀಡಿರುವ ಹೇಳಿಕೆಯಲ್ಲಿ ಏನು ತಪ್ಪಿದೆ? ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ. ನನ್ನ ಹೇಳಿಕೆಗೆ ಉಪ್ಪು ಖಾರ ಹಾಕಿ ಹೇಳುತ್ತಿದ್ದಾರೆ. ಮುಸ್ಲಿಮರು ಸೇರಿ ಎಲ್ಲರಿಗೂ ರಕ್ಷಣೆ ಕೊಡುತ್ತೇನೆ ಎಂದು ಹೇಳಿದ್ದೇನೆ.
ಹುಬ್ಬಳ್ಳಿಯಲ್ಲಿ ಸೋಮವಾರ ಸಂಜೆ ನಡೆದ ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಡುವುದಾಗಿ ಘೋಷಣೇ ಮಾಡಿದ್ದರು. ಮುಂದೆ ಅದನ್ನು 10 ಸಾವಿರ ಕೋಟಿಗೆ ಹೆಚ್ಚಿಸುವ ನಮ್ಮ ಉದ್ದೇಶ. ನಿಮ್ಮ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಬೇಕು. ದೇಶದ ಸಂಪತ್ತಲ್ಲಿ ನಿಮಗೆ ಪಾಲು ಸಿಗಬೇಕು. ನಿಮಗೆ ಅನ್ಯಾಯವಾಗೋಕೆ ಬಿಡಲ್ಲ. ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂದು ಹೇಳಿದ್ದರು.