ಬೆಳಗಾವಿ: ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದ ಸಮಾಜದಲ್ಲಿ ದೊಡ್ಡ ಕ್ಷೋಭೆ(ಅಲ್ಲೋಲ-ಕಲ್ಲೋಲ) ಉಂಟಾಗುತ್ತದೆ ಎಂದು ವಿಶ್ವ ಪ್ರಸನ್ನ ತೀರ್ಥ ಪೇಜಾವರ ಶ್ರೀಗಳು ಹೇಳಿದ್ದಾರೆ. ಹಿಜಾಬ್ ವಾಪಾಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ‘ಕಾನೂನು ಮಾಡಲಿ ಅದು ಸಮಾಜದಲ್ಲಿ ಒಂದು ಪಂಗಡವನ್ನ ಗುರಿಯಾಗಿರಿಸಿಕೊಂಡು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದ ಎಲ್ಲರ ಮುಖ್ಯಮಂತ್ರಿ ಅವರು ಆಗಿದ್ದಾರೆ ಹೊರತು ಯಾವುದೇ ಒಂದು ಪಂಗಡದ ಸಿಎಂ ಅಲ್ಲ. ಇಂತಹ ನಡುವಳಿಕೆ ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಮೊನ್ನೆ ಪರೀಕ್ಷೆ ಬರೆಯುವಾಗ ಹಿಂದೂಗಳಾದವರು ಕಾಲುಂಗರ, ತಾಳಿ ತಗೆಯಬೇಕು ಒಂದು ಕಡೆ ಹೀಗೆ, ಮತ್ತೊಂದು ಪಂಗಡದವರಿಗೆ ಮುಸುಕು ದಾರಿಗಳು ಆಗಿ ಹೋಗಬಹುದು ಎನ್ನುತ್ತಾರೆ. ಇದನ್ನ ಯಾರು ಮಾಡಬಾರದು, ಇವರಂತೂ ಖಂಡಿತವಾಗಿ ಮಾಡಬಾರದು ಎಂದು ಪೇಜಾವರ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.