ವಿಜಯಪುರ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

ವಿಜಯಪುರ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಜಿಲ್ಲೆಯ ಇಂಡಿ ತಾಲೂಕಿನ ಆಳೂರ ಗ್ರಾಮದ ರಾವುತಪ್ಪ ವಿಠೋಬಾ ಕಾಂಬಳೆ (23) ಶಿಕ್ಷೆಗೊಳಗಾದ ಆರೋಪಿ.

ಆರೋಪಿ ರಾವುತಪ್ಪ ಕಾಂಬಳೆ ಈತನು ಅದೇ ಗ್ರಾಮದ ಅಪ್ರಾಪ್ತೆಗೆ 100 ರೂ.ಗಳನ್ನು ಕೊಡುವುದಾಗಿ ಆಮಿಷೆ ತೋರಿಸಿ, ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಇಂಡಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂಡಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿತನ ಮೇಲೆ ಪೋಕ್ಸೋ ಕಾಯ್ದೆ ಅಡಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನಗರದ ಹೆಚ್ಚುವರಿ ಜಿಲ್ಲಾ ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಸವಿತಾ ಕುಮಾರಿ ಎನ್. ಅವರು, ಆರೋಪಿ ಅತ್ಯಾಚಾರ ಎಸಗಿದ ಅಪರಾಧವೆಸಗಿದ ಬಗ್ಗೆ ಸಾಕ್ಷಿ ಪುರಾವೆಗಳ ಆಧಾರದ ಮೇಲೆ ಅಪರಾಧ ಸಾಭೀತಾಗಿದೆ ಎಂದು ತೀರ್ಮಾನಿಸಿ 20 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ವಿ.ಜಿ. ಹಗರಗುಂಡ ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.

Sneha Gowda

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 min ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

9 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

26 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

27 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

38 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

39 mins ago