ವಿಜಯಪುರ: ಕಬ್ಬು ತುಂಬಿದ ಟ್ರ್ಯಾಕ್ಟರ್’ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸಾವಿಗೀಡಾದ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ತೆಲಗಿ ಬಳಿ ನಡೆದಿದೆ.
ಮೃತಪಟ್ಟವರನ್ನು ಚೀರಲದಿನ್ನಿ ಗ್ರಾಮದ ಈರಣ್ಣ ವಾಲಿಕಾರ (22) ಹಾಗೂ ಹಿಂಬದಿ ಸವಾರ ಸಿದ್ದಣ್ಣಗೌಡ ಜಮದರಕಾನೆ (22) ಎಂದು ಗುರುತಿಸಲಾಗಿದೆ.
ಬೈಕ್ ಸವಾರರಿಬ್ಬರು ಚೀರಲದಿನ್ನಿ ಮಾರ್ಗವಾಗಿ ಬರುವ ವೇಳೆ ರಸ್ತೆ ಬದಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿದ್ದು ಓರ್ವ ಸ್ಥಳದಲ್ಲಿ ಸಾವಿಗೀಡಾಗಿದ್ದು, ಇನ್ನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಕೂಡಗಿ ಎನ್’ಟಿಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.