ವಿಜಯಪುರ: ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗಂಗೂರ ಬಳಿ ನಡೆದಿದೆ.ಕಾರ್ ನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗಂಗೂರ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಸಲೀ(20), ಸೈಫನ್(17) ಮೃತಪಟ್ಟಿದ್ದಾರೆನ್ನಲಾಗಿದೆ.
ಹುನಗುಂದದಿಂದ ಮುದ್ದೇಬಿಹಾಳ ಮಾರ್ಗವಾಗಿ ದೇವರಹಿಪ್ಪರಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿಯಾಗಿದೆ ಎನ್ನಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.