ವಿಜಯಪುರ: ಇಲ್ಲಿನ ಹೊರ ವಲಯದ ಇಂಡಿ ರಸ್ತೆಯಲ್ಲಿರುವ ವಿಜಯಪುರ ಮಹಾನಗರ ಪಾಲಿಕೆ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬುಧವಾರ ಮಧ್ಯಾಹ್ನ ತ್ಯಾಜ್ಯ ವಿಲೇವಾರಿ ಯಂತ್ರವೊಂದನ್ನು ದುರಸ್ತಿ ಮಾಡುವಾಗ ಇಬ್ಬರು ಪೌರ ಕಾರ್ಮಿಕರು ಆಕಸ್ಮಿಕವಾಗಿ ಸಾವಿಗೀಡಾಗಿದ್ದಾರೆ.
ಮಹಾ ನಗರ ಪಾಲಿಕೆ ಕಾಯಂ ಪೌರಕಾರ್ಮಿಕ ರಫೀಕ್ ಬಾಬುಸಾಬ್(41) ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಅಯೂಬ್ ಶೇಖ್ (55) ಸಾವಿಗೀಡಾದವರು ಎಂದು ಗುರುತಿಸಲಾಗಿದೆ.
ತ್ಯಾಜ್ಯ ವಿಲೇವಾರಿ ಘಟಕದ ಸ್ಕಿಡ್ ರೋಲರ್ ಮಷಿನ್ ರಿಪೇರಿ ಮಾಡುವಾಗ ಈ ದುರ್ಘಟನೆ ನಡೆದಿದ್ದು, ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.