ವಿಜಯಪುರ: ಡಿ. 13 ರಿಂದ ಬೆಳಗಾವಿಯಲ್ಲಿ ಅಧಿವೇಶನ ಮಾಡುವುದು ಪಕ್ಕಾ ಆಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ಈ ಕುರಿತು ಇಲ್ಲಸಲ್ಲದ ಆರೋಪ ಮಾಡುವುದು ಸತ್ಯಕ್ಕೆ ದೂರವಾಗಿದೆ. ಅಲ್ಲದೇ, ಈಗಾಗಲೇ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸಕಲ ಸಿದ್ಧತೆ ಮಾಡಲಾಗುತ್ತಿದ್ದು, ಅಧಿಕಾರಿಗಳ, ಶಾಸಕರು, ಸಚಿವರುಗಳಿಗೆ ಉಳಿದುಕೊಳ್ಳಲು ಸಕಲ ಸಿದ್ಧತೆ ಮಾಡಲಾಗಿದೆ. ಅದಕ್ಕಾಗಿ ಕಾಂಗ್ರೆಸ್ ನವರು ಆರೋಪ ಮಾಡುವುದು ಬಿಟ್ಟು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ಮಾಡಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆಗಲ್ಲ. ಆದರೆ, ಮುಖ್ಯಮಂತ್ರಿಗಳು ಸಚಿವರ ಮೌಲ್ಯ ಮಾಪನ ಮಾಡುತ್ತಿದ್ದಾರೆ. ಇನ್ನು ಸಚಿವ ಸಂಪುಟ ವಿಸ್ತರಣೆ ಅಧಿಕಾರ ಮುಖ್ಯಮಂತ್ರಿ ಅವರಿಗೆ ಇದೆ. ಆದರೆ, ಸಚಿವ ಸಂಪುಟದ ವಿಸ್ತರಣೆ ಅಜೆಂಡಾ ಇಲ್ಲ ಎಂದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಫೀಸ್ ಹಾಗೂ ಅಭಿವೃದ್ಧಿ ಕೆಲಸಗಳಿಗಾಗಿ ದೆಹಲಿ ಪ್ರವಾಸ ಮಾಡಿದ್ದಾರೆ ಎಂದು ಹೇಳಿದರು.