ವಿಜಯಪುರ, ; ಇಲ್ಲಿಗೆ ಸಮೀಪದ ಬೋಳೆಗಾಂವ ಗ್ರಾಮದಲ್ಲಿ ತನ್ನ ತಾಯಿಯ ಹಲ್ಲಿನ ಸೆಟ್ ಮುರಿದಳು ಎನ್ನುವ ಕ್ಷುಲಕ ಕಾರಣಕ್ಕೆ ಮುಗ್ಧ ಆರು ವರ್ಷದ ಬಾಲಕಿಯನ್ನು ಕೊಲೆ ಮಾಡಿದ ತನ್ನ ಆರೋಪಿಯನ್ನು ಪೊಲೀಸರು ಮಿಂಚಿನ ತನಿಖೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಣ್ಣ ವಿಷಯಕ್ಕೆ ಬದುಕಿ ಬಾಳಬೇಕಾದ ಮಗುವನ್ನು ಕೊಲೆ ಮಾಡಿದ ಘಟನೆಗೆ ಇಡೀ ಜಿಲ್ಲೆಯೇ ಕಣ್ಣೀರು ಹಾಕುವಂತಾಗಿದೆ. ಈ ಕೃತ್ಯವೆಸಗಿ ಏನೂ ಆಗದವರಂತೆ ಓಡಾಡುತ್ತಿದ್ದ ಆರೋಪಿಯನ್ನು ಪೊಲೀಸರು ಅತ್ಯಂತ ಚಾಣಾಕ್ಷತನದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬೋಳೇಗಾಂವ ಗ್ರಾಮದ ಸಂಗನಗೌಡ ಬಾಬುಗೌಡ ಬಿರಾದಾರ ಎಂದು ಗುರುತಿಸಲಾಗಿದೆ. ಆರೋಪಿ ಕಳೆದ 9 ರಂದು ಅಪ್ರಾಪ್ತ ಬಾಲಕಿಯನ್ನು ಪ್ರಜ್ಞೆತಪ್ಪಿಸಿ ನಿರ್ದಯವಾಗಿ ಕೊಲೆ ಮಾಡಿ ಗೊಬ್ಬರ ಚೀಲದಲ್ಲಿ ಹಾಕಿ ಶವವನ್ನು ಒಂದು ಕಡೆ ಹೂತಿಟ್ಟಿದ್ದ, ಈ ಕುರಿತು ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…