ವಿಜಯಪುರ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಅಕ್ರಮವಾಗಿದ್ದು ನಿಜ ಇದರಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲರೂ ಇದ್ದಾರೆ ಎಂದರು.
ಈ ಪ್ರಕರಣವನ್ನು ಮುಚ್ಚಿ ಹಾಕೋಕೆ ಆಗುವುದಿಲ್ಲ, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ನಮ್ಮ ಸರ್ಕಾರ ಇದೆ ಅಂತಾ ನಾನು ಸಮರ್ಥನೆ ಮಾಡಿಕೊಳ್ಳೋದಿಲ್ಲ ಎಂದರು. ಎಲ್ಲ ಕಳ್ಳರಿದ್ದಾರೆ, ಇಲ್ಲಿ ಮೂಲ ಬಿಜೆಪಿಯವರಿಲ್ಲ. ಡಿಕೆಶಿ ಜೊತೆಗೆ ಈ ಕಳ್ಳರ ಫೋಟೋ ಇವೆ. ಅವರು ಎಲ್ಲ ಕಡೆಗೂ ತಿರುಗಾಡುತ್ತಾರೆ ಪಾರ್ಟಿಯವರು ಅವರನ್ನೆ ನಂಬುತ್ತಾರೆ. ಕಳ್ಳರನ್ನ ನಂಬಿದಕ್ಕೆ ಇಂಥ ಹಗರಣ ಆಗುತ್ತಿವೆ ಎಂದರು.
ದಕ್ಷ ಪೊಲೀಸ್ ಅಧಿಕಾರಿಗಳ ಕೈಗೆ ತನಿಖೆಯನ್ನ ಒಪ್ಪಿಸಲಿ ಡಿಸಿ- ಎಸ್ಪಿಗಳ ನೇಮಕಕ್ಕೆ ಮೊದಲು ಹಣ ತೆಗೆದುಕೊಳ್ತಿರಲಿಲ್ಲ. ಈಗ ಡಿಸಿ-ಎಸ್ಪಿ ಹುದ್ದೆಗಳನ್ನ ನಿಲಾವ್ (ಹರಾಜು)ಗೆ ಇಟ್ಟಿದ್ದಾರೆ ಎಂದರು.
ಪಿಎಸ್ಐ ಮರು ಪರೀಕ್ಷೆ ವಿಚಾರ ಕುರಿತು ಮಾತನಾಡಿ, ಮರುಪರೀಕ್ಷೆ ನಡೆಸುವುದು ಸ್ವಾಗತಾರ್ಹ. ಅರ್ಹರಿಗೆ 10 ಸಾರಿ ಪರೀಕ್ಷೆ ನಡೆಸಿದರು ಅವರು ಬೇಜಾರಾಗಲ್ಲ. ಮೆರಿಟ್ ಇದ್ದವರಿಗೆ ಮರು ಪರೀಕ್ಷೆ ಸಮಸ್ಯೆ ಆಗಲ್ಲ ಎಂದರು. ಬ್ಲೂಟೂತ್ ಇಟ್ಟುಕೊಂಡು ಪರೀಕ್ಷೆ ಬರೆದವರಿಗೆ ತೊಂದರೆ ಆಗುತ್ತೆ, ತೊಂದರೆ ಆಗಬೇಕು ಎಂದರು.
ಸಿಎಂ ದೆಹಲಿ ಪ್ರವಾಸ, ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ಗೊತ್ತಿಲ್ಲ. ಪಾರ್ಟಿ ಹೈಕಮಾಂಡ್ ಏನು ನಿರ್ಧಾರ ಮಾಡುತ್ತೋ ಎಲ್ಲರೂ ಒಪ್ಪಬೇಕಾಗುತ್ತೆ. ರಾಜ್ಯದಲ್ಲಿ ಸಚಿವ ಸಂಪುಟ ಬದಲಾವಣೆಗೆ ಹೈಕಮಾಂಡ್ ತೀರ್ಮಾನಿಸಿದೆ. ಶೀಘ್ರದಲ್ಲೆ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.
ಬಿಗ್ಬಾಸ್ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…
ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಾವು ಪ್ರತಿದಿನ ಸೋಶಿಯಲ್ ಮಿಡಿಯಾಗಳಲ್ಲಿ ಹಲವಾರು ಟ್ವೀಟ್ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್ ಗಳು ನಮ್ಮನ್ನು ನಗುವಂತೆ…
ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಈಗ ಮತ್ತೊಂದು ವಿವಾದಾತ್ಮಕ…
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…