ವಿಜಯಪುರ: ಪವರ್ಸ್ಟಾರ್ ಪುನೀತರಾಜಕುಮಾರ ಅಕಾಲಿಕ ನಿಧನ ಹಿನ್ನೆಲೆ ಮನನೊಂದು ಅಭಿಮಾನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿನಡೆದಿದೆ.
ಶರಣಪ್ಪ ಅಮೋಘಿ ಬಿಸನಾಳ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಶರಣಪ್ಪ ಬಿಸನಾಳ ಈತ ಪುನೀತ ಅಭಿಮಾನಿಯಾಗಿದ್ದು, 40 ಡಯಾಬಿಟಿಸ್ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಬಿಎಲ್’ಡಿಇ ಖಾಸಗಿ ಆಸ್ಪತ್ರೆ ರವಾನಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.