ಆಲಮಟ್ಟಿ: ಹಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಯಲಗೂರ ಕ್ರಾಸ್ ನಿಂದ ಆಲಮಟ್ಟಿ ಮಾರ್ಗವಾಗಿ ಬೆಂಗಳೂರಿಗೆ ತೆರಳುವ ಖಾಸಗಿ ಬಸ್ಸು ಮತ್ತು ಆಲಮಟ್ಟಿಯಿಂದ ಅಬ್ಬಿಹಾಳ ಗ್ರಾಮಕ್ಕೆ ಹೋಗುತ್ತಿದ್ದ ಬೈಕ್ ಗೆ ಬಸ್ಸು ಡಿಕ್ಕಿ ಹೊಡೆದಿರುವದರಿಂದ ಅಪಘಾತ ಸಂಭವಿಸಿದೆ.
ಮೃತರನ್ನು ನಿಡಗುಂದಿ ತಾಲ್ಲೂಕಿನ ಅಬ್ಬಿಹಾಳ ಗ್ರಾಮದ ಸುನೀಲ.ಮಲ್ಲಪ್ಪ.ಮಂಕಣಿ(23) ಹಾಗೂ ಯಲ್ಲನಗೌಡ.ಬಸವರಾಜ. ಮಂಕಣಿ(20) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪಿಎಸೈ ಚಂದ್ರಶೇಖರ ಹೆರಕಲ್, ಸಿಪಿಐ ಸೋಮಶೇಖರ ಜುಟ್ಟಲ್ ಹಾಗೂ ಡಿವೈಎಸ್ಪಿ ಅರುಣಕುಮಾರ ಕೋಳೂರ ಭೇಟಿ ನೀಡಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…
ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.
ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್ನಲ್ಲಿ…
ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.