News Karnataka Kannada
Tuesday, May 07 2024
ವಿಜಯಪುರ

ಮತಾಂತರ ನಿಲ್ಲಿಸದಿದ್ದರೆ ತೀವ್ರ ಪ್ರತಿಕ್ರಿಯೆ ಎದುರಿಸಬೇಕಾದೀತು: ಪ್ರಮೋದ್ ಮುತಾಲಿಕ್ ಎಚ್ಚರಿಕೆ

Pramod Muthalik
Photo Credit :

ವಿಜಯಪುರ :  ಮತಾಂತರ ಮಾಡುವುದು ದೇಶದ್ರೋಹಿ ಚಟುವಟಿಕೆ ಆಗಿದ್ದು, ಇದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಅವರಿಗೆ ತೀವ್ರ ಪ್ರತಿಕ್ರಿಯೆ ಕೊಡಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಎಚ್ಚರಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕ್ರಿಶ್ಚಿನ್ ಮಿಷಿನರಿಗಳಿಂದ ಮತಾಂತರ ಪಿಡುಗು ಹೆಚ್ಚಾಗುತ್ತಿದ್ದು, ಆಸೆಯ ಆಮಿಷಗಳನ್ನೊಡ್ಡಿ, ರೋಗ ನಿವಾರಣೆಯ ನೆಪದಲ್ಲಿ ಹಿಂದೂಗಳನ್ನು ಪುಸಲಾಯಿಸಿ, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ.

ಇದಕ್ಕೆ ದಲಿತರು, ಲಿಂಗಾಯತರು, ಬ್ರಾಹ್ಮಣರು ಕೂಡ ಬಲಿಯಾಗುತ್ತಿದ್ದು, ಇಂಥವರನ್ನು ಶ್ರೀರಾಮ ಸೇನೆ ಹಾಗೂ ಮಠಾಧೀಶರ ನೇತೃತ್ವದಲ್ಲಿ ಮತ್ತೆ ಘರವಾಪಸಿ ಮಾಡಲಾಗುತ್ತಿದೆ ಎಂದರು.

ಕ್ರಿಶ್ಚಿಯನ್ ಮಿಷಿನರಿಗಳು ಪ್ರಾರ್ಥನೆ ಮಾಡುತ್ತ ತಮ್ಮ ಪಾಡಿಗೆ ತಾವು ಇರಬೇಕು. ತೀವ್ರ ಪ್ರತಿಕ್ರಿಯೆ ಕೊಡಲಾಗುವುದು ಎಂದರು.
ರಾಜ್ಯದಲ್ಲಿ ಮತಾಂತರ ಕಾಯ್ದೆ ಜಾರಿಗೊಳಿಸುವಂತೆ 50 ಜನ ಮಠಾಧೀಶರ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಈ ಕಾಯ್ದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ನೀಲಕಂಠ ಕಂದಗಲ್, ರಾಕೇಶ ಮಠ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು