ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.
ಇಂದು ಬೆಳಗಿನ ಜಾವ 6.45 ಮತ್ತು ತಡರಾತ್ರಿ 1.30 ರ ಸುಮಾರಿಗೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಲಘಾಣ ಗ್ರಾಮದ ಸುತ್ತ 7 ಬಾರಿ ಜನರಿಗೆ ಭೂಕಂಪನದ ಅನುಭವವಾಗಿದೆ. ಮಲಘಾಣ, ಮಸೂತಿ ಗ್ರಾಮಗಳ 10 ಕಿ.ಮೀ ವ್ಯಾಪ್ತಿಯಲ್ಲಿ ಕಂಪನದ ಅನುಭವವಾಗಿದೆ.ಇನ್ನು ನಿನ್ನೆ ಜಿಲ್ಲೆಯ ತ್ರಿಕೋಟಾ ತಾಲೂಕಿನ ಕೆ. ಸಿದ್ದಾಪುರ, ಧನ್ನರ್ಗಿ ಗ್ರಾಮಗಳಲ್ಲಿ ತಡರಾತ್ರಿ 1.50 ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿದ್ದಾರೆ.