News Karnataka Kannada
Monday, April 29 2024
ವಿಜಯಪುರ

ವಿಜಯಪುರ: ಪತ್ನಿಯನ್ನು ಉಸಿರು ಗಟ್ಟಿಸಿ ಹತ್ಯೆ ಮಾಡಿ ಪತಿ ಆತ್ಮಹತ್ಯೆ

Accident Sharadhacar Bng Main 08072021
Photo Credit :

ವಿಜಯಪುರ: ಶೀಲ ಶಂಕಿಸಿ ಪತ್ನಿಯನ್ನು ಉಸಿರು ಗಟ್ಟಿಸಿ ಹತ್ಯೆ ಮಾಡಿದ ಪತಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಬೇನಾಳ ಆರ್.ಎಸ್. ಗ್ರಾಮದ ಹೊರ ವಲಯಕ್ಕೆ ಪತ್ನಿಯನ್ನು ಕರೆದೊಯ್ದ ಶಿವಪ್ಪ ಹೊರ ಭಾಗದ ಜಮೀನಿನ ಶೆಡ್ ನಲ್ಲಿ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ನಂತರ ಭಯಗೊಂಡು ಜಮೀನಿನ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿಡಗುಂದಿ ತಾಲೂಕಿನ ಬೇನಾಳ ಅರ್.ಎಸ್. ಪುನರ್ವಸತಿ ಕೇಂದ್ರದ ಹುನುಮವ್ವ (38) ಹತ್ಯೆಯಾದ ದುರ್ದೈವಿ. ಶಿವಪ್ಪ ಮನಗೂಳಿ(45 ) ಶೀಲ ಶಂಕಿಸಿ ಪತ್ನಿಯನ್ನು ಉಸಿರು ಗಟ್ಟಿಸಿ ಹತ್ಯೆ ಮಾಡಿದ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ನಿಡಗುಂದಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು