ವಿಜಯಪುರ: ಶೀಲ ಶಂಕಿಸಿ ಪತ್ನಿಯನ್ನು ಉಸಿರು ಗಟ್ಟಿಸಿ ಹತ್ಯೆ ಮಾಡಿದ ಪತಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಬೇನಾಳ ಆರ್.ಎಸ್. ಗ್ರಾಮದ ಹೊರ ವಲಯಕ್ಕೆ ಪತ್ನಿಯನ್ನು ಕರೆದೊಯ್ದ ಶಿವಪ್ಪ ಹೊರ ಭಾಗದ ಜಮೀನಿನ ಶೆಡ್ ನಲ್ಲಿ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ನಂತರ ಭಯಗೊಂಡು ಜಮೀನಿನ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಿಡಗುಂದಿ ತಾಲೂಕಿನ ಬೇನಾಳ ಅರ್.ಎಸ್. ಪುನರ್ವಸತಿ ಕೇಂದ್ರದ ಹುನುಮವ್ವ (38) ಹತ್ಯೆಯಾದ ದುರ್ದೈವಿ. ಶಿವಪ್ಪ ಮನಗೂಳಿ(45 ) ಶೀಲ ಶಂಕಿಸಿ ಪತ್ನಿಯನ್ನು ಉಸಿರು ಗಟ್ಟಿಸಿ ಹತ್ಯೆ ಮಾಡಿದ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ನಿಡಗುಂದಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.