News Karnataka Kannada
Sunday, April 28 2024
ವಿಜಯಪುರ

ವಿಜಯಪುರ: 12 ವರ್ಷದ ಬಾಲಕ ವಿದ್ಯುತ್ ಶಾಕ್​ಗೆ ಬಲಿ

Police in Mulubagil emptying a lake to investigate 8 years old murder case
Photo Credit :

ವಿಜಯಪುರ : ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಇಲ್ಲೊಂದಷ್ಟು ಹುಡುಗರು ಇಂದು ಹೋಳಿ ಹಬ್ಬ ಮಾಡಿ ಸಂಭ್ರಮಿಸುತ್ತಿದ್ದರು. ಆದರೆ ದುರದೃಷ್ಟವಶಾತ್, ಅವರೆಲ್ಲ ಶೋಕದ ಮಡುವಿನಲ್ಲಿ ಮುಳುಗುವಂತಾಗಿದೆ. ಅಷ್ಟಕ್ಕೂ ಕಾರಣವಾಗಿದ್ದು ಅದೊಂದು ದುರಂತ.

ವಿಜಯಪುರ ಜಿಲ್ಲೆ ಕೊಲ್ಹಾರ ತಾಲ್ಲೂಕಿನ ತಳೇವಾಡ ಗ್ರಾಮದಲ್ಲಿ ಈ ಅವಘಡ ಸಂಭವಿಸಿದ್ದು, ಹಣಮಂತ ಬೀರಪ್ಪ ವಾಲಿಕಾರ (12) ಎಂಬ ಬಾಲಕ ಸಾವಿಗೀಡಾಗಿದ್ದಾನೆ. ಈತ ಹೋಳಿಯಾಟಕ್ಕೆಂದು ಅಣಿಗೊಳಿಸುತ್ತಿದ್ದಾಗ ವಿದ್ಯುತ್ ಶಾಕ್​ಗೆ ಒಳಗಾಗಿ ಸಾವಿಗೀಡಾಗಿದ್ದಾನೆ.

ಬಣ್ಣದಾಟಕ್ಕೆಂದು ಗ್ರಾಮ ಪಂಚಾಯಿತಿ ವತಿಯಿಂದ ನೀರಿನ ತೊಟ್ಟಿ ನಿರ್ಮಿಸಲಾಗಿತ್ತು. ಅದಕ್ಕೆ ನೀರು ತುಂಬುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಂಡಾಗಿ ನೀರಿನ ತೊಟ್ಟಿಗೆ ಬಿದ್ದಿದೆ. ಇದರಿಂದ ವಿದ್ಯುತ್ ಶಾಕ್​ಗೆ ಒಳಗಾಗಿ ಈತ ಮೃತಪಟ್ಟಿದ್ದಾನೆ.

ಘಟನೆಗೆ ಗ್ರಾಮ ಪಂಚಾಯತಿಯ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಗ್ರಾಮ ಪಂಚಾಯಿತಿ ಮುಂದೆ ಬಾಲಕನ ಶವವಿಟ್ಟು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಸ್ಥಳಕ್ಕೆ ಕೂಡಗಿ ಎನ್​​ಟಿಪಿಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು