ವಿಜಯಪುರ: ಸಿಂದಗಿಯ ಮತದಾರರು ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಜಿಲ್ಲೆಯ ಸಿಂದಗಿ ಉಪ ಚುನಾಚಣೆ ಹಿನ್ನೆಲೆ ಆಲಮೇಲ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ರೋಡ್ ಶೋಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಸಿಂದಗಿ ಕ್ಷೇತ್ರದಲ್ಲಿ ಇಂದು ಹಾಗೂ ನಾಳೆ ಎರಡು ದಿನ ಪ್ರಚಾರ ಮಾಡಲಿದ್ದೇನೆ. ಮೇಲ್ನೋಟಕ್ಕೆ ರಮೇಶ ಭೂಸನೂರ ಅವರು ಗೆಲ್ಲೋದು ಖಚಿತ ಎಂದರು.
ಕೆಂದ್ರ ಹಾಗೂ ರಾಜ್ಯದಲ್ಲೂ ಬಿಜೆಪಿ ಇರೋದರಿಂದ ಅಭಿವೃದ್ಧಿ ಆಗುತ್ತೆ ಎಂದು ಕ್ಷೇತ್ರದ ಮತದಾರರು ಬಿಜೆಪಿಗೆ ಮತ ನೀಡಲು ನಿರ್ಧರಿಸಿದ್ದಾರೆ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪರದಾಡುತ್ತಿವೆ. ಮತ ಎಣಿಕೆ ಕೆಂದ್ರದಲ್ಲಿ ಬಹಳ ಹೊತ್ತು ಇರೋದಿಲ್ಲ. ಸಿಂದಗಿಯಲ್ಲಿ ಬಿಜೆಪಿ ಸದೃಢವಾಗಿದೆ, ಇಲ್ಲಿ ಗೆಲ್ಲಲು ಸಮಸ್ಯೆ ಇಲ್ಲ ಎಂದರು.
ಕಾಂಗ್ರೆಸ್- ಜೆಡಿಎಸ್ ನವರು ಆರ್ ಎಸ್ ಎಸ್ ಬಗ್ಗೆ ಮಾತನಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿ, ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಉತ್ತರ ಕೊಡೋಕೆ ಇಷ್ಟಪಡೋದಿಲ್ಲ. ಚುನಾವಣೆ ಬಂದಿದೆ, ಅಭಿವೃದ್ಧಿ ಕೆಲಸಗಳನ್ನು ಮಾಡಿರುವುದುನ್ನು ಮುಂದಿಟ್ಟುಕೊಂಡು ಮತ ಕೇಳಿ ಎಂದು ಹೆಳೋಕೆ ಇಷ್ಟಪಡುತ್ತೇನೆ ಎಂದರು.