News Karnataka Kannada
Monday, May 06 2024
ವಿಜಯಪುರ

ಸಿಂದಗಿ ಉಪಚುನಾವಣೆ, ಬಿಜೆಪಿ ಗೆಲುವಿಗೆ ಪ್ಲಾನ್: ಲಕ್ಷ್ಮಣ ಸವದಿ

Lakshman Savadi
Photo Credit :

ವಿಜಯಪುರ: ಸಿಂದಗಿ ಉಪ ಚುನಾವಣೆಯಲ್ಲಿ 20 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ಲಾನ್ ಹಾಕಿಕೊಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಜಿಲ್ಲೆಯ ಸಿಂದಗಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಭೂಸನೂರ ಅವರು ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣಾ ಪ್ರಚಾರಕ್ಕೆ 7 ತಂಡಗಳನ್ನು ರೆಡಿ ಮಾಡಲಾಗಿದೆ. ನಿರೀಕ್ಷೆಗಿಂತ ಹೆಚ್ಚಿನ ಮತಗಳು ಬಿಜೆಪಿಗೆ ಬರಲಿವೆ ಎಂದರು.

ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಕರ್ತರ ಎರೆಡು ಸುತ್ತಿನ ಸಭೆ ನಡೆದಿದೆ. ಈ ಹಿಂದೆ ಸತತ ಮೂರು ಬಾರಿ ಬಿಜೆಪಿ ಗೆದ್ದಿದೆ, ಆದರೆ ಕಳೆದ ಬಾರಿ ಕ್ಷೇತ್ರ ಕಳೆದುಕೊಳ್ಳುವಂತಾಯಿತು ಎಂದರು.

ಪ್ರಸ್ತುತ ಉಪ ಚುನಾವಣೆಗೆ ಮನೆ-ಮನೆ ಬೂತ್ ಮಟ್ಟದಲ್ಲಿ ಚುನಾವಣೆಯ ತಂಡಗಳು ರೆಡಿಯಾಗಿವೆ. ವಿ. ಸೋಮಣ್ಣ, ಶಶಿಕಲಾ ಜೊಲ್ಲೆ, ಸಿ.ಸಿ. ಪಾಟೀಲ ಚುನಾವಣೆ ಮುಗಿಯುವವರೆಗೂ ಇಲ್ಲೆ ಇರುತ್ತಾರೆ ಎಂದರು.

ಅಲ್ಲದೆ ಮುಖ್ಯಮಂತ್ರಿಗಳು ಕೂಡ ಪ್ರಚಾರಕ್ಕೆ ಬರಲಿದ್ದಾರೆ. ಎರೆಡು ದಿನಗಳ ವರೆಗೆ ಯಡಿಯೂರಪ್ಪನವರು ಪ್ರಚಾರಕ್ಕೆ ಬರಲಿದ್ದಾರೆ ಎಂದರು.

ಅಭ್ಯರ್ಥಿ ಆಯ್ಕೆಗೆ ತಡವಾದ ವಿಚಾರ ಕುರಿತು ಪ್ರತಿಕ್ರಿಯಿಸಿ, ಮೊದಲೇ ಅಭ್ಯರ್ಥಿ ಪಟ್ಟಿ ಕಳುಹಿಸಿದ್ದೇವು. ಉತ್ತರ ಭಾರತದಲ್ಲಿ ನವರಾತ್ರಿ ಹಿನ್ನೆಲೆ. ಅಮಾವಾಸ್ಯೆ ಕಳೆದ ಮೇಲೆ ಅಭ್ಯರ್ಥಿ ಹೆಸರು ಪ್ರಕಟಿಸಲಾಗಿದೆ ಎಂದರು. ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಕೆ.ಎಸ್. ಈಶ್ವರಪ್ಪ, ವಿ.ಸೋಮಣ್ಣ ಪತ್ರಿಕಾಗೋಷ್ಠಿಯಲ್ಲಿ ಇದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು