ವಿಜಯಪುರ: ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿಯ ಎರಡೂ ಅಭ್ಯರ್ಥಿಗಳು 20 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ಆಡಳಿತ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬೊಮ್ಮಾಯಿ ಆಡಳಿತ ಮೆಚ್ಚಿ ಜನ ಬಿಜೆಪಿ ಮತ ಹಾಕುತ್ತಾರೆ. ನೂರಕ್ಕೆ 100 ರಷ್ಟು ನಾವು ಗೆಲ್ಲುತ್ತೇವೆ ಎಂದರು.
ಕಾಂಗ್ರೆಸ್ ನವರು ಹತಾಶರಾಗಿ ಮನ ಬಂದಂತೆ ಮಾತನಾಡ್ತಿದ್ದಾರೆ. ರಾಜಕಾರಣಿಗಳಿಗೆ ಒಂದು ಸಂಸ್ಕ್ರತಿ ಇರಬೇಕು, ಆದರೆ ಆ ಸಂಸ್ಕ್ರತಿಯ ಗೆರೆಯನ್ನು ದಾಟಿ ಅವರು ಮಾತನಾಡುತ್ತಿದ್ದಾರೆ ಎಂದರು.
ಅವರು ಏನೇ ಸುಳ್ಳು ಆರೋಪ ಮಾಡಿದ್ರು, ಜನ ನಂಬುತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯನವರು ಹತಾಶರಾಗಿ ಆರೋಪ ಮಾಡುತ್ತಿದ್ದಾರೆ ಎಂದರು.