ವಿಜಯಪುರ: ನಗರದ ಸೊಲ್ಲಾಪುರ ರಸ್ತೆಯ ಬಿಎಲ್ ಡಿಇ ಹೊಸ ಆವರಣದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಂಡ ಸ್ವ ಸಹಾಯ ಸಂಘಗಳ ಸಮಾವೇಶ ಹಾಗೂ ಸಮುದಾಯ ಕಾರ್ಯಕ್ರಮಗಳ ಸೌಲಭ್ಯ ವಿತರಣೆಗೆ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು.
ಡಾ.ವೀರೇಂದ್ರ ಹೆಗ್ಗಡೆ ಅವರ ಸುಪುತ್ರಿ ಶ್ರದ್ಧಾ ಅಮಿತ್, ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಮುಖಂಡೆ ಸುನೀತಾ ಚವ್ಹಾಣ, ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ವಿದ್ಯಾರಾಣಿ ತುಂಗಳ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್. ಮಂಜುನಾಥ, ಬ್ಯಾಂಕ್ ಆಪ್ ಬರೋಡಾ ವ್ಯವಸ್ಥಾಪಕ ಅನಿಲಕುಮಾರ ಇದ್ದರು.
ಕಾರ್ಯಕ್ರಮಕ್ಕೂ ಮುನ್ನ ಸಾಲಂಕೃತ ರಥದಲ್ಲಿ ಮೆರವಣಿಗೆಯೊಂದಿಗೆ ವೇದಿಕೆ ವರೆಗೂ ಕರೆ ತರಲಾಯಿತು. ಮೆರವಣೆಗೆ ಯುದ್ಧಕ್ಕು ಕುಂಭಹೊತ್ತ ಸುಮಂಗಲೆಯರು, ಡೊಳ್ಳುಕುಣಿತ, ಕುದುರೆ ಕುಣಿತ, ಲಂಬಾಣಿ ನೃತ್ಯಗಳ ಮೂಲಕ ಸಂಭ್ರಮದಿಂದ ಕರೆತರಲಾಯಿತು.