ವಿಜಯಪುರ :
ವಿಜಯಪುರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಹಿಜಾಬ್ ಸಂಘರ್ಷ ಮುಂದುವರೆದಿದ್ದು, ನಿನ್ನೆ ವಿದ್ಯಾರ್ಥಿಯರು ಹಾಗೂ ಪೋಷಕರು ಹಿಜಾಬ್ ಗೆ ಅವಕಾಶ ನೀಡಬೇಕು ಎಂದು ಪ್ರತಿಭಟನೆ ನಡೆಸಿದ್ದರು. ಇಂದು ಕೂಡ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಆವರಣದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಯಮ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ನಗರದ 144 ಸೆಕ್ಷನ್ ಜಾರಿ ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ನೀಡಿದ್ದಾರೆ.