ವಿಜಯಪುರ: ಬಿಜೆಪಿಯು ಬಾಂಡ್ ಹೆಸರಿನಲ್ಲಿ ₹12,930 ಕೋಟಿ ಲೂಟಿ ಮಾಡಿದೆ. ರಫೇಲ್ ಹಗರಣ ಮುಚ್ಚಿಹಾಕಿದಂತೆ ಇದನ್ನು ಮುಚ್ಚಿಹಾಕಲು ಯತ್ನಿಸಿದ್ದರು ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಅಧಿಕಾರಕ್ಕೆ ಬಂದಮೇಲೆ ರಾಜಕೀಯ ಪಕ್ಷಗಳಿಗೆ ಯಾರು ದೇಣಿಗೆ ಕೊಡ್ತಾರೆ ಅವರ ಹೆಸರು ಗೌಪ್ಯವಾಗಿ ಇಡಬೇಕೆಂದು ಕಾನೂನು ತಂದು, ಚುನಾವಣಾ ಬಾಂಡ್ಗಳ ಹೆಸರಿನಲ್ಲಿ ಬಿಜೆಪಿ ಹಗರಣ ಮಾಡಿದೆ ಎಂದು ದೂರಿದರು.
ಬಿಜೆಪಿಯಲ್ಲಿ 2014ರ ಮುಂಚೆ ಫಂಡ್ ಇರಲಿಲ್ಲ. ಆಗ ರಾಜನಾಥ ಸಿಂಗ್ ಅವರು ಪಕ್ಷದ ಎಲ್ಲರಿಗೂ ದೇಣಿಗೆ ಬೇಡಿದ್ದರು. ಅದಾದ ಬಳಿಕ 2024ರಲ್ಲಿ ಅಂದರೆ ಕೇವಲ ಹತ್ತೇ ವರ್ಷದಲ್ಲಿ ಶ್ರೀಮಂತ ಪಕ್ಷ ಆಗಿದ್ದಾರೆ ಎಂದರೆ ಇದು ಅಧಿಕೃತವಾಗಿ ಅವರು ಮಾಡಿದ ಭ್ರಷ್ಟಾಚಾರ ಎಂದರು.
ಪಾಕಿಸ್ತಾನ ನಮ್ಮ ವೈರಿ ರಾಷ್ಟ್ರ ಎಂದು ಭಾಷಣ ಮಾಡಿ, ಅಲ್ಲಿಂದ ಫಂಡ್ ತೆಗೆದುಕೊಂಡಿದ್ದಾರೆಂದು ಆರೋಪಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಚೇರಮನ್ ನಿವೃತ್ತಿಯಾದರೂ ಹಗರಣ ಮುಚ್ಚಿಹಾಕಲು ಅವರನ್ನೇ ಮತ್ತೆರಡು ವರ್ಷ ಮುಂದುವರೆಸಿದ್ದಾರೆ. ತಕ್ಷಣವೇ ಅವರ ರಾಜೀನಾಮೆ ಪಡೆಯಬೇಕು. ಅಲ್ಲದೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ ಹಾಗೂ ಗೃಹ ಸಚಿವ ಅಮೀತ್ ಶಾ ಸಹ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…