ವಿಜಯಪುರ: ನಗರದ ಮೂವರು ವಿಜ್ಞಾನಿಗಳು ಪ್ರಸಕ್ತ ಸಾಲಿನ ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 2023 ನೇ ವರ್ಷದ ವಿಶ್ವದ ಉನ್ನತ ಪ್ರತಿಶತ 2 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ನಗರದ ಬಿ ಎಲ್ ಡಿ ಇ ವಿಶ್ವವಿದ್ಯಾಲಯದ ಮೂರು ಜನ ಸಂಶೋಧಕರನ್ನು ಆಯ್ಕೆ ಮಾಡಲಾಗಿದೆ.
ನಗರದದ ಬಿ ಎಲ್ ಡಿ ಇ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ, ಡಾ. ಕುಶಾಲದಾಸ ಹಾಗೂ ಡಾ. ರಘು ಎ ವಿ ಅವರಿಗೆ ಔಷಧ ವಿಜ್ಞಾನ, ಶರೀರ ಶಾಸ್ತ್ರ ಹಾಗೂ ಪಾಲಿಮರ್ ಕ್ಷೇತ್ರದಲ್ಲಿನ ಸಂಶೋಧನೆಗಾಗಿ 2023 ನೇ ವರ್ಷದ ವಿಶ್ವದ ಉನ್ನತ 2 ಪ್ರತಿಶತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.
ಡಾ. ರಾಘವೇಂದ್ರ ಕುಲಕರ್ಣಿ ಅವರು ಸತತ 3 ನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಪಾಲಿಮರ್ ಆಧಾರಿತ ಔಷಧ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗೈದ ಭಾರತದ ಸಂಶೋಧಕರ ಪೈಕಿ 15 ನೇ ಸ್ಥಾನ & ವಿಶ್ವದ 127 ನೇ ಸ್ಥಾನ ಪಡೆದಿದ್ದಾರೆ. ಡಾ. ರಾಘವೇಂದ್ರ ಕುಲಕರ್ಣಿ ಅವರು 121 ಸಂಶೋಧನಾ ಪ್ರಕಟನೆಗಳನ್ನು ರಚಿಸಿದ್ದಾರೆ. ಅಲ್ಲದೇ, 9 ಪೇಟೆಂಟ್ ಗಳನ್ನೂ ಸಹ ಪಡೆದಿದ್ದಾರೆ.
ಡಾ. ಕುಶಾಲದಾಸ ಶರೀರ ಶಾಸ್ತ್ರ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗೈದ ಭಾರತದ ಸಂಶೋಧಕರ ಪೈಕಿ 186 ನೇ ಸ್ಥಾನ ಹಾಗೂ ವಿಶ್ವದಲ್ಲಿ 2407 ನೇ ಸ್ಥಾನ ಪಡೆದಿದ್ದಾರೆ. ಅವರು 135 ಸಂಶೋಧನಾ ಪ್ರಕಟನೆಗಳನ್ನು ರಚಿಸಿದ್ದಾರೆ. ಅಲ್ಲದೇ ಎರಡು ಪೇಟೆಂಟ್ ಗಳನ್ನು ಪಡೆದಿದ್ದಾರೆ.
ಇನ್ನು ಡಾ. ರಘು ಎ ವಿ ಅವರು ಪಾಲಿಮರ್- ರಸಾಯನಶಾಸ್ತ್ರ ಕ್ಷೇತ್ರದಲ್ಲಿ ಸಂಶೋಧನೆಗೈದ ಭಾರತದ ಸಂಶೋಧಕರ ಪೈಕಿ 20 ನೇ ಸ್ಥಾನ ಹಾಗೂ ವಿಶ್ವದ 326 ನೇ ಸ್ಥಾನ ಪಡೆದಿದ್ದಾರೆ. ಅಲ್ಲದೇ, 110 ಸಂಶೋಧನಾ ಪ್ರಕಟನೆಗಳನ್ನು ರಚಿಸಿದ್ದಾರೆ.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…
ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ…
ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…
ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…
ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.