ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆ ಶಿಸ್ತು ಮತ್ತು ಶಾಂತಿ-ಸುವ್ಯವಸ್ಥೆಯಿಂದ ಕೂಡಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಮತದಾನದಲ್ಲಿ ಭಾಗವಹಿಸಿ ತಮ್ಮ ಜವಾಬ್ದಾರಿ ಮೆರೆದ ಮತದಾರರು, ಕಾರ್ಯಕರ್ತರಿಗೆ ಹಾಗೂ ಚುನಾವಣೆಯ ಕರ್ತವ್ಯದಲ್ಲಿ ಭಾಗವಹಿಸಿದ ಸಿಬ್ಬಂದಿ, ಜಿಲ್ಲಾಡಳಿತಕ್ಕೆ ಅವರು ಧನ್ಯವಾದ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಯಾವೊಂದು ಸಣ್ಣ ಘಟನೆಯೂ ನಡೆಯದೇ ಮತದಾನ ಶಾಂತಿಯುತವಾಗಿತ್ತು. ಈ ಕಾರ್ಯ ಸುಗಮಗೊಳಿಸಿದ ಚುನಾವಣೆ ಆಯೋಗ, ಜಿಲ್ಲಾಡಳಿತ ಅಭಿನಂದನಾರ್ಹ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.