News Karnataka Kannada
Sunday, May 12 2024
ವಿಜಯಪುರ

ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್

ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಭೇಟಿಯಾದರು.
Photo Credit : NewsKarnataka

ವಿಜಯಪುರ: ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಭೇಟಿಯಾದರು.

ಈ ಸಂದರ್ಭ ಶಿವಪುತ್ರಪ್ಪ ಅವರಿಂದ ಶುಭಾಶಯ ಹಾಗೂ ಅನೇಕ ಸಲಹೆಗಳನ್ನು ಆಲಗೂರರು ಪಡೆದರು. ನಿಮ್ಮ ಹಾಗೂ ಪಕ್ಷದ ಪರ ಒಳ್ಳೆಯ ವಾತಾವರಣ ಇದೆ. ಜನ ಈ ಸಲ ಬದಲಾವಣೆ ಬಯಸಿದ್ದಾರೆ. ಅವರು ಬೇಸತ್ತಿದ್ದಾರೆ. ಜನಗಳಿಗೆ ಜಿಲ್ಲೆಯ ಅಭಿವೃದ್ಧಿ ಬೇಕಾಗಿದೆ. ನೀವು ಖಂಡಿತ ವಿಜಯಶಾಲಿಯಾಗುತ್ತೀರಿ ಎಂದು ದೇಸಾಯಿಯವರು ಹರಸಿದ್ದಾರೆ.

ಹಾಗೆಯೇ ಅಂದಿನ ದಿನಗಳ ರಾಜಕಾರಣವನ್ನು ಅವರು ಮೆಲುಕು ಹಾಕಿದರು. ನೀವು ಸಂಸದರಾಗಿ ಆಯ್ಕೆಯಾದರೆ ಜನಹಿತ ಕಾಪಾಡಿ ಎಂದು ಕಿವಿ ಮಾತನ್ನು ಹೇಳಿದರು. ಗುಂಡಕನಾಳ ಶ್ರೀಗಳು, ಶಾಸಕರಾದ ಅಪ್ಪಾಜಿ ನಾಡಗೌಡ, ಮಾಜಿ ಶಾಸಕ ಶರಣಪ್ಪ ಸುಣಗಾರ, ಡಾ.ಮಹಾಂತೇಶ ಬಿರಾದಾರ ಸೇರಿದಂತೆ ಅನೇಕರು ಈ ವೇಳೆ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು