Categories: ವಿಜಯಪುರ

ಬಸವನಾಡಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ- ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ

ವಿಜಯಪುರ: ವಿಧಾನಸಭಾೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ.10ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಮತದಾನ ನಡೆದಿದ್ದು, ಮತ ಎಣಿಕೆ ಕಾರ್ಯ ಮೇ 13ರಂದು ಶನಿವಾರ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ನಡೆಯಲಿದ್ದು, ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ ಅವರು ತಿಳಿಸಿದ್ದಾರೆ.

ಒಡೆಯರ ಸದನ
ಈ ಕಟ್ಟಡದಲ್ಲಿ ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ಮತಕ್ಷೇತ್ರಗಳ ಮತ ಎಣಕಿ ನಡೆಯಲಿದೆ.
ಆದಿಲ್ ಶಾಹಿ ಸದನ
ಈ ಕಟ್ಟಡದಲ್ಲಿ ಬಸವನ ಬಾಗೇವಾಡಿ ಮತ್ತು ಬಬಲೇಶ್ವರ ಮತಕ್ಷೇತ್ರಗಳ ಮತ ಎಣಕಿ ನಡೆಯಲಿದೆ.
ಹೊಯ್ಸಳ ಸದನ
ಈ ಕಟ್ಟಡದಲ್ಲಿ ಬಿಜಾಪುರ ನಗರ ಮತ್ತು ನಾಗಠಾಣ(ಮೀ) ಮತಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ವಿಜಯ ನಗರ ಸದನ
ಈ ಕಟ್ಟಕಟ್ಟಡದಲ್ಲಿ ಇಂಡಿ ಮತ್ತು ಸಿಂದಗಿ ಮತಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

ಮೇ 13 ರಂದು ಶನಿವಾರ ಬೆಳಿಗ್ಗೆ 7.30ಕ್ಕೆ ಆಯಾ ಚುನಾವಣಾಧಿಕಾರಿಗಳು ಹಾಗೂ ಸ್ಪರ್ಧಿಸಿದ ಅಭ್ಯರ್ಥಿಗಳು ಅಥವಾ ಅವರ ಚುನಾವಣೆ ಏಜೆಂಟರ್ ಸಮ್ಮುಖದಲ್ಲಿ ತೆರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

14 ಟೇಬಲ್‍ಗಳಲ್ಲಿ ಮತ ಎಣಿಕೆ
ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳ ಮತ ಎಣಿಕೆಗೆ ಸಂಬಂಧಿಸಿದಂತೆ ಪ್ರತಿ ವಿಧಾನಸಭಾ ಮತಕ್ಷೇತ್ರಕ್ಕೆ 14 ಟೇಬಲ್‍ಗಳಲ್ಲಿ ಇವಿಎಂ ಮತ ಎಣಿಕೆ ಹಾಗೂ 4 ಟೇಬಲ್‍ಗಳಲ್ಲಿ ಅಂಚೆ ಮತಪತ್ರದ ಎಣಿಕೆ ಮತ್ತು ಸೇವಾ ಮತದಾರರ ಅಂಚೆ ಮತಪತ್ರಗಳನ್ನು ಚುನಾವಣಾಧಿಕಾರಿಗಳ ಟೇಬಲ್‍ನಲ್ಲಿ ಎಣಿಕೆ ಕಾರ್ಯ ಮಾಡಲಾಗುವುದು.

ಮತ ಎಣಿಕೆ ಸುತ್ತುಗಳು
ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳ ಪೈಕಿ ಮತಗಟ್ಟೆಗಳನುಸಾರವಾಗಿ ಬಸವನಬಾಗೇವಾಡಿ ಮತಕ್ಷೇತ್ರದ 17 ಸುತ್ತುಗಳು, ಮುದ್ದೇಬಿಹಾಳ, ದೇವರಹಿಪ್ಪರಗಿ ಹಾಗೂ ಬಬಲೇಶ್ವರ ಮತಕ್ಷೇತ್ರದ 18 ಸುತ್ತುಗಳು ಹಾಗೂ ಬಿಜಾಪುರ ನಗರ, ಇಂಡಿ ಮತ್ತು ಸಿಂದಗಿ ಮತಕ್ಷೇತ್ರದ 20 ಸುತ್ತುಗಳು ಹಾಗೂ ನಾಗಠಾಣ ಮತಕ್ಷೇತ್ರದ 22 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ಮಾಡಲಾಗುವುದು.
408 ಮತ ಎಣಿಕೆ ಸಿಬ್ಬಂದಿ: ಮತ ಎಣಿಕೆ ಕಾರ್ಯಕ್ಕಾಗಿ ಪ್ರತಿ ವಿಧಾನಸಭಾವಾರು 14 ಟೇಬಲ್‍ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಪ್ರತಿ ವಿಧಾನಸಭೆಗೆ 17 ಎಣಿಕೆ ಮೇಲ್ವಿಚಾರಕರು, 17 ಎಣಿಕೆ ಸಹಾಯಕರು 17 ಮೈಕ್ರೋ ಆಬ್ಸರವರ್ ಒಳಗೊಂಡಂತೆ ಒಟ್ಟು 51 ಅಧಿಕಾರಿ-ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಿಗೆ 112 ಟೇಬಲ್, 136 ಎಣಿಕೆ ಮೇಲ್ವಿಚಾರಕರು, 136 ಎಣಿಕೆ ಸಹಾಯಕರು, 136 ಮೈಕ್ರೋ ಆಬ್ಸರವರ್ ಸೇರಿದಂತೆ ಒಟ್ಟು 408 ಅಧಿಕಾರಿ-ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

224 ಅಂಚೆ ಮತ ಪತ್ರ ಎಣಿಕೆ ಸಿಬ್ಬಂದಿ
ಅದರಂತೆ ಅಂಚೆ ಮತಪತ್ರಗಳ ಎಣಿಕೆಯನ್ನು ಪ್ರತಿ ವಿಧಾನಸಭಾ ವಾರು 4 ಟೇಬಲ್‍ಗಳಲ್ಲಿ ಜಿಲ್ಲೆಯ 8 ವಿಧಾನಸಭೆಗಳಿಗೆ 32 ಟೇಬಲ್‍ಗಳ ವ್ಯವಸ್ಥೆ, ಹಾಗೂ ಪ್ರತಿ ವಿಧಾನಸಭೆವಾರು 5 ಎಣಿಕೆ ಮೇಲ್ವಿಚಾರಕರು, 10 ಎಣಿಕೆ ಸಹಾಯಕರು, 5 ಮೈಕ್ರೋ ಆಬ್ಸರ್‍ವರ್ ಹಾಗೂ 4 ಎಆರ್‍ಓ ಸೇರಿದಂತೆ ಒಟ್ಟು 28 ಜನ ಪ್ರತಿ ವಿಧಾನಸಭೆಗೆ ನಿಯೋಜಿಸಲಾಗಿದೆ. ಜಿಲ್ಲೆಯ 8 ವಿಧಾನಸಭೆ ಮತಕ್ಷೇತ್ರಗಳಿಗೆ ಅಂಚೆ ಮತ ಪತ್ರ ಎಣಿಕೆಗಾಗಿ 32 ಟೇಬಲ್‍ಗಳ ವ್ಯವಸ್ಥೆ, 40 ಎಣಿಕೆ ಮೇಲ್ವಿಚಾರಕರು, 80 ಎಣಿಕೆ ಸಹಾಯಕರು, 40 ಮೈಕ್ರೋ ಆಬ್ಸರವರ್, 32 ಎಆರ್‍ಓ ಸೇರಿದಂತೆ ಒಟ್ಟು 224 ಅಧಿಕಾರಿ-ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ಆಯೋಗದಿಂದ ಅನುಮತಿ ಪಡೆದ ಅಧಿಕಾರಿಗಳು, ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು, ಜಿಲ್ಲಾ ಚುನಾವಣಾಧಿಕಾರಿಗಳಿಂದ ಅಧಿಕೃತ ಪಾಸ್ ಪಡೆದ ಮಾಧ್ಯಮದವರು, ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿ-ಸಿಬ್ಬಂದಿ, ಸ್ಪರ್ಧಿಸಿದ ಅಭ್ಯರ್ಥಿ ಹಾಗೂ ಅವರ ಚುನಾವಣಾ ಏಜೆಂಟರು ಮತ್ತು ಎಣಿಕೆ ಏಜೆಂಟರಿಗೆ ಮಾತ್ರ ಪ್ರವೇಶಾವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

1 hour ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

1 hour ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

2 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago