ವಿಜಯಪುರ: ವಿಜಯಪುರ ನಗರದ ಗೋಳಗುಮ್ಮಟ ಏರಿಯಾದಲ್ಲಿ ಮೆದುಳು ಜ್ವರಕ್ಕೆ ಬಾಲಕ ಬಲಿಯಾದ ಘಟನೆ ನಡೆದಿದೆ.
ಮೃತ ಬಾಲಕನನ್ನು ರಜಿತ್ ಮಿಥುನ್ ಅಳ್ಳಿಮೋರೆ (10) ಎಂದು ಗುರುತಿಸಲಾಗಿದೆ.
ಕಳೆದ ವಾರದ ಹಿಂದೆ ರಜಿತ್ ತೀವ್ರ ಜ್ವರದಿಂದ ಬಳಲುತ್ತಿದ್ದ. ಚಿಕಿತ್ಸೆಗಾಗಿ ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ರಜಿತ್ ನನ್ನ ದಾಖಲಿಸಲಾಗಿತ್ತು. ಜ್ವರ ನೆತ್ತಿಗೆ ಏರಿ ಮೆದುಳಲ್ಲಿ ಬಾವು ಕಾಣಿಸಿಕೊಂಡಿತ್ತು. ಕಾರಣ ಚಿಕಿತ್ಸೆ ಫಲಿಸದೆ ಬಾಲಕ ನಿನ್ನೆ ಸಾವನ್ನಪ್ಪಿದ್ದಾನೆ.