News Karnataka Kannada
Monday, April 29 2024
ವಿಜಯಪುರ

ಶಬರಿಮಲೆ ಅಯ್ಯಪ್ಪ ಸ್ವಾಮೀ ಬಗ್ಗೆ ಕೀಳು ಪೋಸ್ಟ್‌: ಪ್ರಕರಣ ದಾಖಲು

ಶಬರಿಮಲೆ ಅಯ್ಯಪ್ಪ ಕೋಟಿ ಕೋಟಿ ಹಿಂದುಗಳ ಆರಾಧ್ಯ ದೈವ. ಇಂತಹ ದೇವರಾದ ಶಬರಿಮಲೆ ಅಯ್ಯಪ್ಪ ಸ್ವಾಮಿ ಬಗ್ಗೆ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಪ್ರಕರಣ ನಡೆದಿದೆ.
Photo Credit : News Kannada

ವಿಜಯಪುರ: ಶಬರಿಮಲೆ ಅಯ್ಯಪ್ಪ ಕೋಟಿ ಕೋಟಿ ಹಿಂದುಗಳ ಆರಾಧ್ಯ ದೈವ. ಇಂತಹ ದೇವರಾದ ಶಬರಿಮಲೆ ಅಯ್ಯಪ್ಪ ಸ್ವಾಮಿ ಬಗ್ಗೆ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಪ್ರಕರಣ ನಡೆದಿದೆ. ಈ ಹಿಂದೆ ಇಂತಹದ್ದೇ ಪ್ರಕರಣದಲ್ಲಿ ಜೈಲು ಸೇರಿದ್ದ ಈತ ಮತ್ತೆ ಅದೇ ಚಾಳಿ ಮುಂದುವರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಯ್ಯಪ್ಪ ಮಾಲಾಧಾರಿಗಳು ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಗೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಸಿಂದಗಿಯ ಜಗದೀಶ್ ಕಲಬುರ್ಗಿ ಎಂಬಾತ ತನ್ನ ಫೇಸ್​ಬುಕ್ ಖಾತೆಯಲ್ಲಿ ಅಯ್ಯಪ್ಪ ಸ್ವಾಮಿ ಹುಟ್ಟಿನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ. ಸದ್ಯ, ಅಯ್ಯಪ್ಪ ಸ್ವಾಮಿ ಬಗ್ಗೆ ಅಪಮಾನ ಮಾಡಿದ ಆರೋಪಿ ಜಗದೀಶ ಕಲಬುರ್ಗಿ ವಿರುದ್ಧ ಆಕ್ರೋಶಗೊಂಡಿರುವ ಮಾಲಾಧಾರಿಗಳು ಸಿಂದಗಿ ಪೊಲೀಸ್ ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಅಲ್ಲದೆ, ಅಯ್ಯಪ್ಪ ಸ್ವಾಮೀ ಹುಟ್ಟಿನ ಬಗ್ಗೆ ಅವಮಾನಕಾರಿಯಾಗಿ ಪೋಸ್ಟ್ ಮಾಡಿರುವ ಜಗದೀಶ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀ ಧರ್ಮಶಾಸ್ತ್ರ ಸೇವಾ ಸಮೀತಿಯಿಂದ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು