News Karnataka Kannada
Saturday, May 18 2024
ವಿಜಯಪುರ

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ : ಶೋಭಾ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
Photo Credit : NewsKarnataka

ವಿಜಯಪುರ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಅವರು ಭಾರತೀಯ ಜನತಾ ಪಾರ್ಟಿ, ಇಂಡಿ ಮಂಡಲ ವತಿಯಿಂದ 2024 ಸಾರ್ವತ್ರಿಕ ಲೋಕಸಭಾ ಚುನಾವಣೆಯ ಬಹಿರಂಗ ಸಭೆಯನ್ನು ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು,ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ದೇಶದ ನೆಚ್ಚಿನ ನಾಯಕ ಶ್ರೀ ನರೇಂದ್ರಮೋದಿ ಅವರು ರೈತರಿಗೆ, ಮಹಿಳೆಯರಿಗೆ ಜನಸಾಮಾನ್ಯರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ದೇಶದ ಅಭಿವೃದ್ಧಿಗಾಗಿ ಹಾಗೂ ಭಾರತವನ್ನು ವಿಶ್ವ ಗುರುವನ್ನು ಮಾಡಲು ನರೇಂದ್ರ ಮೋದಿಯನ್ನು ಹೊರಟಿದ್ದಾರೆ,
ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ತಾವುಗಳು ಬಿಜೆಪಿಗೆ ಮತ ನೀಡಿ ಎಂದು ಹೇಳಿದರು,

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬರಗಾಲ ಬರುತ್ತದೆ,ಅದೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಅತಿವೃಷ್ಟಿ ಆಗಿತ್ತು ಎಂದು ಹೇಳಿದರು.ಈ ಸಂದರ್ಭದಲ್ಲಿ ವಿಜಯಪೂರ ಲೋಕಸಭಾ ಅಭ್ಯರ್ಥಿ ಶ್ರೀ ರಮೇಶ ಜಿಗಜಿಣಗಿ ಅವರು ಮಾತನಾಡಿ ಇದು ನನ್ನ ಕೊನೆಯ ಚುನಾವಣೆ ಈ ಬಾರಿ ನನಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್ ಕೆ ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯರಾದ ಅರುಣ ಶಹಾಪುರ, ಅಶೋಕ ಅಲ್ಲಾಪೂರ, ಇಂಡಿ ಮತಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಕಾಸುಗೌಡ ಬಿರಾದಾರ, ಇಂಡಿ ಮತಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಬಿ ಡಿ ಪಾಟೀಲ, ಶ್ರೀಶೈಲಗೌಡ ಪಾಟೀಲ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಎಸ್ ಆರ್ ಪಾಟೀಲ್,ಮುಖಂಡರಾದ ಶೀಲವಂತ ಉಮರಾಣಿ, ಮಲ್ಲಿಕಾರ್ಜುನ ಕಿವಡೆ, ರಾಜಶೇಖರ ಸಗಾವಿ,ಸುನಂದಾ ವಾಲಿಕಾರ, ಪದ್ಮಾವತಿ ಪಾಟೀಲ, ಜಯಶ್ರೀ ರೂಗಿಮಠ, ಸಂತೋಷ ಸಾರವಾಡ, ಅಣ್ಣಾರಾಯ ಮದರಿ, ಸೇರಿದಂತೆ ಅನೇಕರು ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು