ವಿಜಯಪುರ: ಆಶಾ ಕಾರ್ಯಕರ್ತೆಯಿಂದ ಕ್ರೈಸ್ತ ಸಮುದಾಯಕ್ಕೆ ಮತಾಂತರ ಮಾಡಿರೋ ಆರೋಪ ಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ಲಂಬಾಣಿ ತಾಂಡಾ 1 ರಲ್ಲಿ ಕೇಳಿ ಬಂದಿದೆ.
ಆಶಾ ಕಾರ್ಯಕರ್ತೆ ವಿಜಯಲಕ್ಷ್ಮಿ ಅಶೋಕಕುಮಾರ ಲಮಾಣಿ ಎಂಬುವರ ವಿರುದ್ಧ ಮತಾಂತರ ಮಾಡಿರುವ ಆರೋಪ ವ್ಯಕ್ತವಾಗಿದೆ.
ತಾಂಡಾದ ನಾಲ್ಕು ಕುಟುಂಬಗಳನ್ನು ಮತಾಂತರ ಮಾಡಲಾಗಿದೆ.
ಮತಾಂತರ ವಿಚಾರವಾಗಿ ಪ್ರಶ್ನಿಸಿದ ತಾಂಡಾದ ಹಿರಿಯರ ವಿರುದ್ಧವೇ ವಿಜಯಲಕ್ಷ್ಮಿ ಹಾಗೂ ಅವರ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಅವರ ವಿರುದ್ಧವೇ ದೂರು ನೀಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಾಂಡಾದ ಹಿರಿಯರು ನಮಗೆ ಕಿರುಕುಳ ನೀಡುತ್ತಿದ್ದಾರೆಂದು ಅವರು ದೂರಿದ್ದಾರೆ.
ತಾಂಡಾದ ಕಾರಭಾರಿ ಧನಸಿಂಗ್ ಲಮಾಣಿ, ತಾಂಡಾದ ನಾಯಕ ರಾಜೂ ನಾಯಕ ಹಾಗೂ ಇತರರ ಮೇಲೆ ಬಸವನಬಾಗೇಬಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಈ ಮಧ್ಯೆ, ತಹಶಿಲ್ದಾರ್ ಯಮನಪ್ಪ, ಸಿಪಿಐ ಶರಣಗೌಡ ನ್ಯಾಮಗೌಡರ ಅವರು ಗುರುವಾರ ತಾಂಡಾಕ್ಕೆ ಆಗಮಿಸಿ ಶಾಂತಿ ಸಭೆ ನಡೆಸಿದ್ದಾರೆ.