ವಿಜಯಪುರ: ಆಶಾ ಕಾರ್ಯಕರ್ತೆಯಿಂದ ಕ್ರೈಸ್ತ ಸಮುದಾಯಕ್ಕೆ ಮತಾಂತರ ಮಾಡಿರೋ ಆರೋಪ ಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ಲಂಬಾಣಿ ತಾಂಡಾ 1 ರಲ್ಲಿ ಕೇಳಿ ಬಂದಿದೆ.
ಆಶಾ ಕಾರ್ಯಕರ್ತೆ ವಿಜಯಲಕ್ಷ್ಮಿ ಅಶೋಕಕುಮಾರ ಲಮಾಣಿ ಎಂಬುವರ ವಿರುದ್ಧ ಮತಾಂತರ ಮಾಡಿರುವ ಆರೋಪ ವ್ಯಕ್ತವಾಗಿದೆ.
ತಾಂಡಾದ ನಾಲ್ಕು ಕುಟುಂಬಗಳನ್ನು ಮತಾಂತರ ಮಾಡಲಾಗಿದೆ.
ಮತಾಂತರ ವಿಚಾರವಾಗಿ ಪ್ರಶ್ನಿಸಿದ ತಾಂಡಾದ ಹಿರಿಯರ ವಿರುದ್ಧವೇ ವಿಜಯಲಕ್ಷ್ಮಿ ಹಾಗೂ ಅವರ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಅವರ ವಿರುದ್ಧವೇ ದೂರು ನೀಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಾಂಡಾದ ಹಿರಿಯರು ನಮಗೆ ಕಿರುಕುಳ ನೀಡುತ್ತಿದ್ದಾರೆಂದು ಅವರು ದೂರಿದ್ದಾರೆ.
ತಾಂಡಾದ ಕಾರಭಾರಿ ಧನಸಿಂಗ್ ಲಮಾಣಿ, ತಾಂಡಾದ ನಾಯಕ ರಾಜೂ ನಾಯಕ ಹಾಗೂ ಇತರರ ಮೇಲೆ ಬಸವನಬಾಗೇಬಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಈ ಮಧ್ಯೆ, ತಹಶಿಲ್ದಾರ್ ಯಮನಪ್ಪ, ಸಿಪಿಐ ಶರಣಗೌಡ ನ್ಯಾಮಗೌಡರ ಅವರು ಗುರುವಾರ ತಾಂಡಾಕ್ಕೆ ಆಗಮಿಸಿ ಶಾಂತಿ ಸಭೆ ನಡೆಸಿದ್ದಾರೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…