ವಿಜಯಪುರ: ಕಾರು ಹಾಗೂ ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ.
ವಿಜಯಪುರದಿಂದ ಜಮಖಂಡಿಗೆ ಕಾರು ಹೊರಟಿತ್ತು. ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಲಾರಿ ಬರುವ ವೇಳೆ ಅಪಘಾತ ಸಂಭವಿಸಿದೆ.
ಇಬ್ಬರು ಪುರುಷರು, ಓರ್ವ ಮಹಿಳೆ, ಓರ್ವ ಬಾಲಕ ಸಾವಿಗೀಡಾಗಿದ್ದಾರೆ. ಮೃತರ ಹೆಸರು ಇನ್ನು ತಿಳಿದು ಬಂದಿಲ್ಲ.
ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.